ಗಡಿ ದಾಟಿ ಬಂದರೆನುಗ್ಗಿ ಹೊಡೀತೀವಿ:ಮತ್ತೆ ಮೋದಿ ಗುಡುಗು
May 13 2025, 11:53 PM ISTಕಿಸ್ತಾನದಲ್ಲಿ ಅಡಗಿರುವ ಉಗ್ರರ ವಿರುದ್ಧದ ಭಾರತ ಬೃಹತ್ ಸೇನಾ ಕಾರ್ಯಾಚರಣೆ ನಡೆಸಿದ ಬಳಿಕ ಇದೇ ಮೊದಲ ಬಾರಿಗೆ ಯೋಧರನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನದ ಪಾಲಿಗೆ ಲಕ್ಷ್ಮಣ ರೇಖೆ ಎಳೆಯಲಾಗಿದೆ’ ಎಂದು ಹೇಳಿದ್ದಾರೆ. ಈ ಮೂಲಕ, ‘ಭಾರತದ ಗಡಿ ದಾಟುವ ದುಸ್ಸಾಹಸಕ್ಕೆ ಕೈ ಹಾಕಿದರೆ ಸರ್ವನಾಶ ಖಚಿತ’ ಎಂದು ಪರೋಕ್ಷವಾಗಿ ಎಚ್ಚರಿಸಿದ್ದಾರೆ.