ರಾಜ್ಯದಲ್ಲಿಂದು ಡಬಲ್ ಧಮಾಕ. ಒಂದೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ, ಮತ್ತೊಂದೆಡೆ ದೀಪಾವಳಿ ಹಬ್ಬದ ಸಡಗರ. ಕನ್ನಡ ಹಬ್ಬದ ದಿನ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ನಟ ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರು ಸೆಲೆಬ್ರೆಟಿಗಳು ಶುಭಾಶಯ ಕೋರಿದ್ದಾರೆ.
ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
‘ಆರ್ಥಿಕವಾಗಿ ಈಡೇರಿಸಬಹುದಾದ ಭರವಸೆಗಳನ್ನು ಮಾತ್ರ ನೀಡಬೇಕು’ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.