ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬಿ.ವೈ. ವಿಜಯೇಂದ್ರ ಕಡತಗಳಿಗೆ ನಕಲಿ ಸಹಿ ಮಾಡಿದ್ದಾರೆ. ಈ ಬಗ್ಗೆ ತನಿಖೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ,ಮುಂಬರುವ ಗ್ರಾ.ಪಂ., ತಾ.ಪಂ., ಜಿ.ಪಂ. ಸೇರಿದಂತೆ ಎಲ್ಲ ಚುನಾವಣೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಎದುರಿಸಲಿದ್ದು, ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ಧೂಳಿಪಟ ಮಾಡಲಿದ್ದೇವೆ ಎಂದು ತಿಳಿಸಿದರು.