• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್‌!

Mar 16 2024, 01:45 AM IST
ತನ್ನ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಸಹಾಯ ಕೋರಿ ತಾಯಿ ಜತೆ ಮನೆಗೆ ಬಂದಿದ್ದ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಯಡಿಯೂರಪ್ಪ ಯಾರಿಗೂ ದ್ರೋಹ ಬಗೆದಿಲ್ಲ: ಸಂಸದ ರಾಘವೇಂದ್ರ

Mar 15 2024, 01:18 AM IST
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾರಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ಕೆ.ಎಸ್. ಈಶ್ವರಪ್ಪ ಅವರು, ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಹಾಗೂ ಅನಂತ್‌ಕುಮಾರ್ ಜೊತೆಗೆ ಪಕ್ಷ ಕಟ್ಟಿದವರು. ಅವರು ಕಟ್ಟರ್ ರಾಷ್ಟ್ರವಾದಿ ಮತ್ತು ಪ್ರಧಾನಿ ಮೋದಿ ಅಭಿಮಾನಿ. ಯಾವುದೇ ಕಾರಣಕ್ಕೂ ಪಕ್ಷವಿರೋಧಿ ಚಿಂತನೆಯನ್ನು ಅವರು ಮಾಡುವುದಿಲ್ಲ. ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆಯ ಸಾರಥ್ಯ ವಹಿಸಿ ರಥ ಮುನ್ನಡೆಸಲಿದ್ದಾರೆಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ಯಡಿಯೂರಪ್ಪ ಅವಧಿಯಲ್ಲಿ ಅಧಿಕ ಅನುದಾನ: ಸಂಸದ

Mar 11 2024, 01:19 AM IST
ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಅತಿ ಹೆಚ್ಚಿನ ಅನುದಾನ ನೀಡಿ, ಕಾಳಜಿ ವಹಿಸಿದ್ದಾರೆ. ಮಕ್ಕಳು ಈ ಸೌಲಭ್ಯದ ಸದುಪಯೋಗ ಪಡೆದು ಅತ್ಯುತ್ತಮ ಫಲಿತಾಂಶದ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಬೇಕು ಎಂದು ಸಂಸದ ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಕೃಷಿ ಬಜೆಟ್‌ ಕೊಟ್ಟ ಯಡಿಯೂರಪ್ಪ ಮಹಾನ್‌ ನಾಯಕ: ಪ್ರಲ್ಹಾದ ಜೋಶಿ

Mar 10 2024, 01:31 AM IST
ಅಭಿವೃದ್ಧಿಗೆ ಹೆಸರಾಗಿರುವ ಬಿ.ಎಸ್‌.ಯಡಿಯೂರಪ್ಪ ಅವರು ಯಾವುದೇ ವಿಷಯವಾದರೂ ಸರಿ ಮಾಡಬೇಕು ಎಂದು ತೀರ್ಮಾನ ಮಾಡಿದರೆ ಮುಗಿತು. ಅದರಿಂದ ಯಾವತ್ತು ಹಿಂದೆ ಸರಿದವರಲ್ಲ. ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದುತ್ವವನ್ನು ರಕ್ಷಣೆ ಮಾಡುವುದರಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶಿವಮೊಗ್ಗದಲ್ಲಿ ಬಣ್ಣಿಸಿದರು.

ಯಡಿಯೂರಪ್ಪ ಕರ್ನಾಟಕದ ಮೋದಿ ಇದ್ದ ಹಾಗೆ: ಶ್ರೀರಾಮುಲು

Mar 03 2024, 01:33 AM IST
ಶ್ರೀಕೃಷ್ಣನಂತೆ ಯಡಿಯೂರಪ್ಪ ಅವರು ನಿಂತು ವಿಜಯೇಂದ್ರ ಅವರಿಗೆ ಅರ್ಜುನನಂತೆ ಶಕ್ತಿ ತುಂಬಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸಲು ಅವಕಾಶ ಮಾಡಿಕೊಡಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಿಜೆಪಿ ಔತಣಕೂಟದಲ್ಲಿ ಅವರು ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.

ಸಂಸದ ರಾಘವೇಂದ್ರ ಗೆಲ್ಲಿಸಿ, ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ ಮನವಿ

Feb 29 2024, 02:04 AM IST
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿರುವ, ಜನಪರ ಕಾಳಜಿ ಹೊಂದಿರುವ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಮನವಿ ಮಾಡಿದ್ದಾರೆ.

ರೈತರ ಏಳಿಗೆಗೆ ಶ್ರಮಿಸಿದ ಏಕೈಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ-ಅನಿಲ ಅಬ್ಬಿಗೇರಿ

Feb 28 2024, 02:33 AM IST
ಗದಗ ಪಂ. ಪುಟ್ಟರಾಜ ಕವಿ ಗವಾಯಿಗಳವರ ಮಠದಲ್ಲಿ ಜಿಲ್ಲಾ ಬಿಜೆಪಿ ಹಾಗೂ ನಗರ ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ೮೧ನೇ ಜನ್ಮ ದಿನವನ್ನು ಪಂ.ಪುಟ್ಟರಾಜ ಕವಿಗವಾಯಿಗಳ ಗದ್ದುಗೆಗಳಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಕ್ಕಳಿಗೆ ಸಿಹಿ ಹಂಚಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹುಟ್ಟುಹಬ್ಬ ಅಂಗವಾಗಿ ಶಿಕಾರಿಪುರ ದೇಗುಲಗಳಲ್ಲಿ ಯಡಿಯೂರಪ್ಪ ವಿಶೇಷ ಪೂಜೆ

Feb 28 2024, 02:33 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಹುಟ್ಟುಹಬ್ಬವನ್ನು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ಆಚರಿಸಿಕೊಂಡರು.

ಯಡಿಯೂರಪ್ಪ ನಾಡು ಕಂಡ ಶ್ರೇಷ್ಠ ರಾಜಕಾರಣಿ: ವಿಪ ಸದಸ್ಯ ರುದ್ರೇಗೌಡ

Feb 28 2024, 02:33 AM IST

ಬಿ.ಎಸ್. ಯಡಿಯೂರಪ್ಪ ಅವರು ನಾಡು ಕಂಡ ಶ್ರೇಷ್ಠ ರಾಜಕಾರಣಿಗಳಲ್ಲಿ ಓರ್ವರಾಗಿದ್ದು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವಲ್ಲಿ ವಹಿಸಿದ ಪಾತ್ರ ಮಹತ್ತರವಾಗಿದೆ ಎಂದು ವಿಧಾನ ಪರಿಷತ್ತು ಶಾಸಕ ಎಸ್. ರುದ್ರೇಗೌಡ ಹೇಳಿದರು.

ಜನಪರ, ರೈತಪರ ನಾಯಕ ಬಿ.ಎಸ್‌. ಯಡಿಯೂರಪ್ಪ: ಅರವಿಂದ್‌

Feb 28 2024, 02:32 AM IST
೨೦೦೮ರಲ್ಲಿ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಗೊಂಡು, ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಅಳಿಲು ಸೇವೆಯನ್ನು ಸಲ್ಲಿಸುವ ಮೂಲಕ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳು ಸಂತೋಷಪಡುವ ವರ್ಷಗಳನ್ನು ಸೃಷ್ಟಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved