ಯತ್ನಾಳ ಬಂಧನಕ್ಕೆ ಮುಸ್ಲಿಮರ ಆಗ್ರಹ
Sep 21 2024, 01:57 AM ISTವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅವರ ಬಗ್ಗೆ ಹಗುರವಾಗಿ ಹಾಗೂ ಪ್ರಚೋದನಕಾರಿ ಮಾತುಗಳನ್ನಾಡಿರುವುದನ್ನು ವಿರೋಧಿಸಿ ಮುಸ್ಲಿಂ ಸಮುದಾಯದವರು ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು. ಈ ವೇಳೆ ಶಾಸಕ ಯತ್ನಾಳ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಪಾದರಕ್ಷೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿ, ಯತ್ನಾಳ ಬಂಧನಕ್ಕೆ ಆಗ್ರಹಿಸಿದರು.