ಎರಡು ಬಾರಿ ಕ್ಷೇತ್ರದ ಶಾಸಕರಾಗಿ ಇಲ್ಲಿಂದ ಸಿಎಂ ಆದ ಕುಮಾರಸ್ವಾಮಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು. ಏನು ಮಾಡಿದ್ದೇನೆ ಎಂದು ತಮ್ಮ ಮಗನನ್ನು ತಂದು ನಿಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.
ನಾನು ಕಳೆದ ಎರಡು ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೇನೆ. ಆದರೆ, ನನ್ನ ವಿರುದ್ಧ ಗೆಲುವು ಸಾಧಿಸಿದ ಕುಮಾರರಸ್ವಾಮಿ ಏನು ಕೆಲಸ ಮಾಡಿದರು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.
ಸೋಲು-ಗೆಲುವು ಏನೇ ಆದರೂ ತಾಲೂಕಿನ ಸಂಬಂಧ ಕಡಿದುಕೊಳ್ಳಲ್ಲ. ಯಾಕಂದ್ರೆ ನಾವು ಈ ಜಿಲ್ಲೆಯ ಜನ. ಜಿಲ್ಲೆ ಹಾಗೂ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್ಗೆ ಬಂದಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷಕ್ಕೆ ವಲಸೆ ಹೋಗುವುದು ಯೋಗೇಶ್ವರ್ ಗೆ ಚಾಳಿಯಾಗಿದೆ. ಈ ಬಾರಿ ರಾಂಗ್ ಪಕ್ಷವನ್ನು ಚಾಯ್ಸ್ ಮಾಡಿಕೊಂಡಿರುವ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಹರಕೆಯ ಕುರಿ ಮಾಡಲಿದೆ ಎಂದು ವಿಪಕ್ಷ ನಾಯಕ ಆರ್ .ಅಶೋಕ್ ತಿಳಿಸಿದರು.
ವಿಧಾನಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಬುಧವಾರ ತಡರಾತ್ರಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಸಂಡೂರು ಕ್ಷೇತ್ರಕ್ಕೆ ಸಂಸದ ಇ.ತುಕಾರಾಂ ಪತ್ನಿ ಇ.ಅನ್ನಪೂರ್ಣ ಅವರಿಗೆ ಹಾಗೂ ಸಿ.ಪಿ.ಯೋಗೇಶ್ವರ್ಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಘೋಷಿಸಿದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಅವರು ಗುರುವಾರ ಬೆಳಗ್ಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.