ಸತ್ತೇಗಾಲ ಯೋಜನೆ: ಜನರ ದಾಹ ತಣಿಸಲಿದ್ದಾಳೆ ಕಾವೇರಿ !

Dec 15 2023, 01:31 AM IST
ಬಯಲು ಸೀಮೆ ಜಿಲ್ಲೆ ರಾಮನಗರಕ್ಕೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವ ಸತ್ತೇಗಾಲ ನೀರಾವರಿ ಯೋಜನೆಯಲ್ಲಿ ಜಲಾಶಯಗಳನ್ನು ತುಂಬಿಸುವುದು ಮಾತ್ರವಲ್ಲದೆ ಕೆರೆಗಳನ್ನೂ ಭರ್ತಿ ಮಾಡಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಜನರ ನೀರಿನ ದಾಹ ನೀಗಿಸುವ ಉದ್ದೇಶ ಹೊಂದಲಾಗಿದೆ.ಈ ಯೋಜನೆ ಅಡಿಯಲ್ಲಿ ಮೊದಲ ಹಂತದಲ್ಲಿ ಸತ್ತೇಗಾಲದಿಂದ ಇಗ್ಗಲೂರು ಎಚ್ .ಡಿ.ದೇವೇಗೌಡ ಬ್ಯಾರೇಜ್ , ಕಣ್ವ, ವೈ.ಜಿ.ಗುಡ್ಡ ಹಾಗೂ ಮಂಚನಬೆಲೆ ಜಲಾಶಯ ತುಂಬಿಸಲಾಗುತ್ತದೆ. ಆನಂತರ ಜಲಾಶಯಗಳಿಂದ ಕೆರೆಗಳಿಗೆ ನೀರು ಹರಿಸಿ ಹಳ್ಳಿಗಳು ಮತ್ತು ಬಿಡದಿ, ಕುಂಬಳಗೂಡು ಪಟ್ಟಣಗಳ ಜನವಸತಿ ಪ್ರದೇಶಗಳಿಗೆ ಕಾವೇರಿ ನೀರು ಪೂರೈಕೆ ಮಾಡಲಾಗುತ್ತದೆ. ಈ ಯೋಜನೆಯಿಂದ ಇಡೀ ರಾಮನರ ಜಿಲ್ಲೆಗೆ ಶಾಶ್ವತ ನೀರಾವರಿ ಸಾಧ್ಯವಾಗಲಿದೆ. ಕೇವಲ ರಾಮನಗರಕಷ್ಟೇ ಅಲ್ಲದೆ, ಮಂಡ್ಯ ಭಾಗಕ್ಕೂ ಅನುಕೂಲವಾಗಲಿದೆ.

ಸಿಂಗಟಾಲೂರು ಏತನೀರಾವರಿ ಯೋಜನೆ: 11 ವರ್ಷದಿಂದ ನೀರು ಬಳಕೆಯಾಗದೇ ಪೋಲು

Dec 04 2023, 01:30 AM IST
1992ರಲ್ಲಿಯೇ ಸಿಂಗಟಾಲೂರು ಏತನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧ ಮಾಡಲಾಯಿತು. ಆದರೆ, ಆಗ ಕಾರ್ಯಗತವಾಗಲಿಲ್ಲ. ನಂತರ ಹೇಗೋ ಆಗೊಮ್ಮೆ, ಈಗೊಮ್ಮೆ ಸರ್ಕಾರದ ಇಚ್ಛಾಶಕ್ತಿಯಿಂದ 30 ವರ್ಷಗಳ ಬಳಿಕ ಯೋಜನೆ ಪೂರ್ಣಗೊಂಡು 2012ರ ನವೆಂಬರ್‌ನಲ್ಲಿ ಲೋಕಾರ್ಪಣೆಗೊಂಡಿತು. ಬಲಭಾಗದಲ್ಲಿ ಸುಮಾರು 48 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಯಿತು. ಆದರೆ, ಎಡಭಾಗದಲ್ಲಿ ಮಾತ್ರ ನೀರಾವರಿ ಇವತ್ತಿಗೂ ಆಗುತ್ತಿಲ್ಲ. ಬಲಭಾಗದಲ್ಲಿ ಹೂವಿನಹಡಗಲಿ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ನೀರಾವರಿಯಾಗಿದೆ. ರೈತರು ಖುಷಿಯಾಗಿದ್ದಾರೆ. ಆದರೆ, ಇದೇ ಯೋಜನೆಯ ಎಡಭಾಗದಲ್ಲಿ ಸುಮಾರು 2.20 ಲಕ್ಷ ಎಕರೆ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಕಾರ್ಯ ಇನ್ನು ನಡೆದಿಲ್ಲ.

ಕೂಲಿ ಕಲ್ಪಿಸಲು ನರೇಗಾ ಯೋಜನೆ ಸದ್ಬಳಕೆಯಾಗಲಿ: ಸಚಿವ ಮಧು

Dec 02 2023, 12:45 AM IST
ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದು ಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆ ಗಂಗೆ ಮೂಲಕ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಸಲಾಗುತ್ತದೆ. ಯಾವ್ಯಾವ ಗ್ರಾಮಗಳು ಯೋಜನೆಯಲ್ಲಿ ಕೈಬಿಟ್ಟು ಹೋಗಿದೆಯೋ ಅಂತಹ ಪ್ರದೇಶಗಳ ಪಟ್ಟಿ ಮಾಡಿಕೊಡಿ. ಜನರಿಗೆ ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆ ಆಗಬಾರದು ಎಂದ ಅವರು, ಕೆಲವೆಡೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪಡವಗೋಡು ಗ್ರಾಪಂನ ಕೆಲವು ಗ್ರಾಮಗಳಲ್ಲಿ 3 ತಿಂಗಳಿನಿಂದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ತಕ್ಷಣ ಸರಿಪಡಿಸಿ ಎಂದು ತಾಕೀತು ಮಾಡಿದರು.

ಜಲಜೀವನ್‌ ಯೋಜನೆ ಹಿನ್ನಡೆ ಕಾರಣರಾದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ

Dec 02 2023, 12:45 AM IST
ತಾಲೂಕಿನ ನೊಣಬೂರು ಹಾದಿಗಲ್ಲು ಮತ್ತು ಕೋಣಂದೂರು ಗ್ರಾಪಂಗಳ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಪ್ರದೇಶದಲ್ಲಿ ಇರುವ ಕೊಳವೆ ಬಾವಿಗಳ ನೀರಿನಲ್ಲಿ ಫ್ಲೋರೈಡ್ ಅಂಶ ಕಂಡು ಬಂದಿರುವುದಾಗಿ ಸಚಿವರ ಗಮನ ಸೆಳೆದ ಶಾಸಕ ಆರಗ ಜ್ಞಾನೇಂದ್ರ, ಈ ಪ್ರದೇಶದ ತೆರೆದ ಬಾವಿಗಳಲ್ಲೂ ಫ್ಲೋರೈಡ್ ಅಂಶ ಇರುವುದು ಆತಂಕಕಾರಿಯಾಗಿದೆ ಎಂದರು. ಈ ಕುರಿತು ಸಚಿವರು ಹಾವೇರಿ ಜಿಲ್ಲೆಯಲ್ಲಿ ಫ್ಲೋರೈಡ್‌ ಅಂಶದ ಬಗ್ಗೆ ಸಂಶೋಧನೆಗೆ ಕ್ರಮ ಕೈಗೊಳ್ಳಲಾಗಿದೆ. ಹೊಸನಗರ ತಾಲೂಕಿನ ಕೆಲವೆಡೆ ಕೂಡ ಈ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಅಗತ್ಯವಾಗಿ ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ಸೂಚಿಸಿ ಸಂಶೋಧನೆ ಮಾಡಿಸುವುದಾಗಿಯೂ ತಿಳಿಸಿ, ಎಲೆಚುಕ್ಕಿರೋಗದ ನಿಯಂತ್ರಣದ ಬಗ್ಗೆ ಸಂಬಂಧಿಸಿದ ವಿಜ್ಞಾನಿಗಳ ಜೊತೆ ಚರ್ಚಿಸಿರುವುದಾಗಿಯೂ ತಿಳಿಸಿದರು.