ಪಂಪ್ ಸೆಟ್ಗಳಿಗೆ ಉಚಿತ ಸೌಕರ್ಯ ಯೋಜನೆ ರದ್ದು ಖಂಡಿಸಿ ಪ್ರತಿಭಟನೆ
Feb 17 2024, 01:16 AM IST, ಈ ಹಿಂದೆ ರಾಜ್ಯ ಸರ್ಕಾರದಿಂದ ಶೀಘ್ರ ವಿದ್ಯುತ್ ಯೋಜನೆ ಅಡಿಯಲ್ಲಿ ಅಕ್ರಮ ಸಕ್ರಮಕ್ಕೆ ಅವಕಾಶ ನೀಡಲಾಗಿತ್ತು. ಈ ಯೋಜನೆಯಡಿ ವಿದ್ಯುತ್ ನಿಗಮಗಳು ರೈತರಿಂದ ಶುಲ್ಕ ಮಾತ್ರ ಕಟ್ಟಿಸಿಕೊಂಡು ಗರಿಷ್ಠ 500 ಮೀಟರ್ ದೂರದವರೆಗೆ ಉಚಿತವಾಗಿ ವಿದ್ಯುತ್ ಮಾರ್ಗ, ಕಂಬ ಹಾಗೂ ಟ್ರಾನ್ಸ್ಫಾರ್ಮರ್ ಸವಲತ್ತು ಕಲ್ಪಿಸುತ್ತಿದ್ದವು. ಇದೀಗ ರಾಜ್ಯ ಸರ್ಕಾರಿ ಈ ಯೋಜನೆಯನ್ನು ರದ್ದುಗೊಳಿಸಿರುವುದರಿಂದ ಇನ್ನು ಮುಂದೆ ರೈತರು ಹೊಸದಾಗಿ ಟಿಸಿ ಪಡೆಯಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿದೆ. ಭೀಕರ ಬರಗಾಲ ಎದುರಿಸುತ್ತಿರುವ ರೈತರನ್ನು ಬೆಂಕಿಯಿಂದ ಬಾಣಲೆಗೆ ಎಸೆದಂತಾಗಿದೆ. ರಾಜ್ಯ ಸರ್ಕಾರ ರೈತರನ್ನು ಗಮನದಲ್ಲಿಟ್ಟುಕೊಂಡು ತನ್ನ ಆದೇಶವನ್ನು ವಾಪಸು ಪಡೆದು ಈ ಹಿಂದಿನ ಪದ್ಧತಿಯನ್ನು ಮರು ಜಾರಿಗೆ ತರಬೇಕೆಂದು ಆಗ್ರಹಿಸಿದರು.