ದಸರಾ ರಜೆ: ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರ ದಂಡು
Oct 23 2023, 12:15 AM ISTನವರಾತ್ರಿ ಹಾಗು ದಸರಾ ರಜೆ ಹಿನ್ನಲೆ ಭಾನುವಾರ ಬಂಡೀಪುರ ಸಫಾರಿ ಹಾಗು ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ದಂಡೇ ನೆರದಿತ್ತು. ಅ.೨೩ ರಂದು ಆಯುಧ ಪೂಜೆ,ಅ.೨೪ ರಂದು ವಿಜಯ ದಶಮಿ ರಜೆಯಿದ್ದ ಕಾರಣ, ಬೆಂಗಳೂರು ನಗರ ಸೇರಿ ರಾಜ್ಯದ ಇತರೆ ಜಿಲ್ಲೆ, ಕೇರಳ ಹಾಗು ತಮಿಳುನಾಡಿನ ಪ್ರವಾಸಿಗರು ಹರಿದು ಬಂದಿದ್ದರು.ಭಾನುವಾರ ಬೆಳಗ್ಗೆ ಹಾಗು ಸಂಜೆ ಬಂಡೀಪುರ ಸಫಾರಿಗೆ ಸಾವಿರಾರು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.ಸಫಾರಿ ಕೇಂದ್ರದ ಆವರಣದಲ್ಲಿ ಕಾರುಗಳು ಸಾಲುಗಟ್ಟಿ ನಿಂತಿದ್ದವು.