ರಸ್ತೆ ಬದಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಶ್ಲಾಘನೆ

Sep 06 2024, 01:03 AM IST
ಬೇಲೂರು ಪಟ್ಟಣದ ಹೃದಯ ಭಾಗದಲ್ಲಿರುವ ಬೇಲೂರು ಬಸ್ ನಿಲ್ದಾಣ ಮುಂಭಾಗ ಹಾಗೂ ಅಕ್ಕಪಕ್ಕದ ಮುಖ್ಯ ರಸ್ತೆಗಳಲ್ಲಿ ಹಬ್ಬದ ದಿನಗಳಂದು ಅತಿ ಹೆಚ್ಚು ವ್ಯಾಪಾರಿಗಳು ರಸ್ತೆಬದಿ ಹಬ್ಬಕ್ಕೆ ಅವಶ್ಯಕತೆ ಇರುವ ವಸ್ತುಗಳನ್ನು ಮಾರಾಟ ಮಾಡಿಕೊಂಡು ಬರುತ್ತಿದ್ದಾರೆ. ಗೌರಿ ಗಣೇಶ ಹಬ್ಬ ಆಚರಿಸಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸುತ್ತಿದ್ದು ಪಟ್ಟಣದ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಹಿನ್ನೆಲೆಯಲ್ಲಿ ರಸ್ತೆ ಬಳಿ ಮಾರಾಟ ಮಾಡುವ ವ್ಯಾಪಾರಸ್ಥರನ್ನು ಸ್ಥಳಾಂತರಿಸಿ ಸರ್ಕಾರಿ ಕಾಲೇಜು ಮೈದಾನದಲ್ಲಿ ಬದಲಿ ವ್ಯವಸ್ಥೆ ಕಲ್ಪಿಸಿರುವ ಪುರಸಭೆ ಅಧ್ಯಕ್ಷರು ಹಾಗೂ ಸಿಬ್ಬಂದಿಗೆ ಸಾರ್ವಜನಿಕರು, ವ್ಯಾಪಾರಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.