ಗ್ರಾಮಗಳ ಅಭಿವೃದ್ಧಿಯಲ್ಲಿ ರಾಜಕೀಯ ಬೇಡ
Aug 30 2025, 01:00 AM ISTಹೆಬ್ಬಾಳು ಗ್ರಾಮದಲ್ಲಿ ಸಮುದಾಯ ಭವನದ ಅಡುಗೆಮನೆ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಲೋಕಸಭಾ ಸದಸ್ಯರು ಮತ್ತು ಸ್ಥಳೀಯ ವಿಧಾನಸಭಾ ಸದಸ್ಯರು ಅನುದಾನ ನೀಡಿದ ಹಿನ್ನೆಲೆಯಲ್ಲಿ ಸಮುದಾಯದ ಭವನ ನಿರ್ಮಾಣವಾಗಿದೆ. ಸಮುದಾಯದ ಭವನದ ಪಕ್ಕದಲ್ಲಿ ಅಡುಗೆಮನೆ, ಶೌಚಾಲಯ ನಿರ್ಮಿಸಲು ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ ಪಟೇಲ್ 5 ಲಕ್ಷವನ್ನು ನೀಡಿದ್ದಾರೆ. ಈ ಗ್ರಾಮಕ್ಕೆ ಅನುದಾನ ಬರಲು ಮಾಜಿ ಸಚಿವರಾದ ಬಿ.ಶಿವರಾಂ ಕೂಡ ಕಾರಣಕರ್ತರಾಗಿದ್ದಾರೆ. ಗ್ರಾಮದ ಅಭಿವೃದ್ಧಿಯಲ್ಲಿ ಯಾವುದೇ ರಾಜಕಾರಣ ಬೇಡ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ದೇಶಾಣಿ ಆನಂದ್ ಹೇಳಿದರು.