ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ರಾಜ್ಯಾಧ್ಯಕ್ಷರಿಗೆ ನಾನು ಮನವಿ ಮಾಡಿದ್ದೇನೆ, ರಾಜೀನಾಮೆ ನೀಡಿಲ್ಲ ಎಂದು ಬಿಜೆಪಿ ಶಾಸಕ ವಿ.ಸುನೀಲ್ಕುಮಾರ್ ಹೇಳಿದ್ದಾರೆ.
ಕೋಟ್ಯಂತರ ರು. ಮುಡಾ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿಯಾಗಿ ತನಿಖೆ ಎದುರಿಸಲು ಸಾಧ್ಯವಿಲ್ಲ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಆಗ್ರಹಿಸಿದರು.