ಮುನ್ನೆಚ್ಚರಿಕೆ ವಹಿಸದ ರಾಜ್ಯ ಸರ್ಕಾರವೇ ಹೊಣೆ: ಸಚಿವ ಜೋಶಿ
Jun 05 2025, 01:00 AM ISTಇಷ್ಟೊಂದು ತುರಾತುರಿಯಲ್ಲಿ ಸಂಭ್ರಮಾಚರಣೆ ಮಾಡುವ ಅಗತ್ಯವೇನಿತ್ತು. ಇಡೀ ದೇಶವೇ ನಿನ್ನೆ ರಾತ್ರಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರವು ಸರಿಯಾದ ರೂಪುರೇಷೆ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ. ತುರ್ತು ಸೇವೆ ನಿಯೋಜಿಸದೆ ಇರುವುದು ಅತ್ಯಂತ ಬೇಜವಾಬ್ದಾರಿ. ಈ ಕೆಟ್ಟ ಘಟನೆಯನ್ನು ತಪ್ಪಿಸಬಹುದಿತ್ತು. ಆದರೆ, ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಮತ್ತು ಹೊಣೆಗಾರಿಕೆಯನ್ನು ಸರ್ಕಾರವೇ ತಗೆದುಕೊಳ್ಳಬೇಕಿದೆ.