ರಾಜ್ಯ ಕಾಂಗ್ರೆಸ್ ಸರ್ಕಾರವು ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದ್ದು, ಇದೀಗ ಜಿಂದಾಲ್ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡುವ ಮೂಲಕ ಮತ್ತೊಂದು ಹಗರಣ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಟೀಕಿಸಿದ್ದಾರೆ.
ಗ್ಯಾರಂಟಿ ಕೊಡೋಕು ಸರ್ಕಾರದವರ ಬಳಿ ಹಣವಿಲ್ಲ. ದಿವಾಳಿತನದಿಂದ ಪಾರಾಗುವುದಕ್ಕೆ ಅವರಿಗೆ ದಾರಿಯೇ ಇಲ್ಲ. ಗ್ಯಾರಂಟಿ ನಿಲ್ಲಿಸಿದ್ರೆ ದೇಶದ ಪಕ್ಷಕ್ಕೆ ತೊಂದರೆಯಾಗುತ್ತೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿರುವುದರಿಂದಲೇ ಬೆಂಗಳೂರಿನಲ್ಲಿ ನೀರಿನ ಬೆಲೆ ಏರಿಕೆ ಮಾಡಿದ್ದಾರೆ.
ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ ಇದೆ. ಹೈಕಮಾಂಡ್ ಕಾಪಾಡುವ, ಸಚಿವರು, ಶಾಸಕರು ಬೆನ್ನಿಗೆ ನಿಲ್ಲುವ ಭ್ರಮೆಯಿಂದ ಹೊರಕ್ಕೆ ಬನ್ನಿ. ಕಾನೂನನ್ನು ಎದುರಿಸಿ. ಪುಂಡಾಟಿಕೆ ಒಪ್ಪಲಾಗದು - ಸಿ.ಮುನಿರಾಜು