ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆ ವಿಚಾರವೀಗ ರಾಜ್ಯ ಸರ್ಕಾರ ಹಾಗೂ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು, ಕುಮಾರಸ್ವಾಮಿ ಸಚಿವರಾದ ನಂತರ ಗಣಿಗಾರಿಕೆಗೆ ನೀಡಿದ್ದ ಅನುಮೋದನೆಗೆ ರಾಜ್ಯ ಸರ್ಕಾರ ತಡೆಯೊಡ್ಡಿದೆ.
ದೆಹಲಿ ಮಾದರಿ ರೈತ ಹೋರಾಟವನ್ನು ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸಲು ಜೂ.24ರಂದು ಶಿವಮೊಗ್ಗ ನಗರದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಗ್ಯಾರಂಟಿ ಯೋಜನೆಗಳು ಜಾರಿಯಾಗಿ ವರ್ಷ ಕಳೆದಿದೆ. ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದಾಗ ನಾನು ಸ್ವಾಗತಿಸಿದ್ದೆ. ಬಡವರಿಗೆ ಅದರಿಂದ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಿದ್ದೆ. ಆದರೆ, ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತಿದೆ.