ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ಇವುಗಳಿಂದ ರಾಜ್ಯದ ಅಭಿವೃದ್ದಿಯಲ್ಲಿ ಯಾವುದೇ ರೀತಿಯ ಕುಂಟಿತವಾಗಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ರಾಜ್ಯ ಬಿಜೆಪಿಯಲ್ಲಿ ಈ ಮಟ್ಟದ ಗೊಂದಲ ಹೆಚ್ಚುವುದಕ್ಕೆ ಕೋರ್ ಕಮಿಟಿ ಸಮರ್ಥವಾಗಿ ನಡೆಯದಿರುವುದೂ ಒಂದು ಕಾರಣ. ಪಕ್ಷದ ಪ್ರಮುಖ ನಿರ್ಧಾರಗಳನ್ನು ಗಟ್ಟಿಯಾಗಿ ತೆಗೆದುಕೊಳ್ಳಬೇಕಾದ ಕೋರ್ ಕಮಿಟಿ ಸಭೆಗಳು ಚೆನ್ನಾಗಿ ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಭೂಮಿಯನ್ನು ನೋಂದಣಿ ಮಾಡಿಕೊಂಡು ಗೇಣಿದಾರ ರೈತರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಅಧಿಕಾರಿಗಳ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದಾಗಿ ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ತಿಳಿಸಿದರು.
ಪೈಲ್ವಾನ್’ ಚಿತ್ರಕ್ಕೆ ದೊರೆತಿದ್ದ 2019ನೇ ಸಾಲಿನ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ‘ಬೇರೆ ಅರ್ಹ ಕಲಾವಿದರಿಗೆ ಕೊಡಿ. ಅರ್ಹರಲ್ಲೊಬ್ಬರಿಗೆ ಪ್ರಶಸ್ತಿ ಸಿಕ್ಕರೆ ನನಗೆ ಅದೇ ಸಂತೋಷ’ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ತೊಂದರೆ ಆಗುತ್ತಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮುಕ್ತವಾಗಿ ಚರ್ಚೆ ಮಾಡಲು ಸಿದ್ಧರಿದ್ದೇವೆ. ಜನತೆ ವದಂತಿ ನಂಬಬಾರದು ಎಂದು ಮೈಕ್ರೋ ಫೈನಾನ್ಸ್ ಇಂಡಸ್ಟ್ರೀ ನೆಟ್ವರ್ಕ್ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು ಹೇಳಿದರು.
ರಾಜ್ಯ ಸರ್ಕಾರ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದ್ದು, ‘ಮೋಹನದಾಸ’ ಚಲನಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಹಾಗೂ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಘೋಷಿಸಲಾಗಿದೆ.