ಕಲಾವಿದ ರವೀಂದ್ರಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಒತ್ತಾಯ

Oct 14 2025, 01:00 AM IST
ಧರ್ಮಸ್ಥಳ ಮಾದರಿಯಲ್ಲಿ ಗಣಪತಿ ಆಸ್ಥಾನ ಮಂಟಪವನ್ನು ಸಿದ್ಧ ಪಡಿಸಿರುವ ಕಲಾವಿದ ಸಿ. ಎಂ. ರವೀಂದ್ರರವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆ ಒತ್ತಾಯ ಮಾಡಿದ ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕಾಳೇನಹಳ್ಳಿ ಆನಂದ ಕುಮಾರ್ ಸರ್ಕಾರಕ್ಕೆ ಒತ್ತಾಯ ಮಾಡಿದರು. ಪಟ್ಟಣದ ಹಿರಿಯ ಕಲಾವಿದರಾದ ಸಿ ಎಂ ರವೀಂದ್ರರ ಕೈಚಳಕದಿಂದ ಪಟ್ಟಣದ ಪ್ರಸನ್ನ ಗಣಪತಿ ಆಸ್ಥಾನ ಮಂಟಪವನ್ನು ಧರ್ಮಸ್ಥಳ ಮಾದರಿಯಲ್ಲಿ ಗಣೇಶನನ್ನು ಅಲಂಕಾರ ಮಾಡಿರುವುದು ಸಾರ್ವಜನಿಕರಿಂದ ತುಂಬಾ ಪ್ರಶಂಸೆಗೆ ಕಾರಣವಾಗಿದೆ.ಇಂತಹ ನುರಿತ ಕಲಾವಿದರನ್ನು ರಾಜ್ಯ ಸರ್ಕಾರ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ಒತ್ತಾಯ ಮಾಡಿದರು.