ಸಿದ್ದರಾಮಯ್ಯ ಅವರು ಏ.2ರಂದು ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ವರಿಷ್ಠ ರಾಹುಲ್ ಗಾಂಧಿ ಸೇರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ಪ್ರಕರಣವೂ ಸೇರಿ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಲ್ಲಿರುವ ಹಲವು ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ
ಸಂಸತ್ ಕಲಾಪದ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಡುವೆ ಬುಧವಾರ ಭರ್ಜರಿ ವಾಗ್ವಾದ ನಡೆದಿದೆ. ಬಿರ್ಲಾ ಒಂದು ಹಂತದಲ್ಲಿ ರಾಹುಲ್ ಮೇಲೆ ಕೋಪಗೊಂಡು ‘ಸದನದ ನಿಯಮಗಳನ್ನು ನೀವು ಪಾಲಿಸುತ್ತಿಲ್ಲ. ಹೀಗಾಗಕೂಡದು’ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ವ್ಯವಸ್ಥೆಯ ಮೇಲೆ ಆರ್ಎಸ್ಎಸ್ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜ್ಯದಲ್ಲಿ ಬಣ ರಾಜಕೀಯ ತೀವ್ರ ಸ್ವರೂಪ ಪಡೆದಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 100 ಕಾಂಗ್ರೆಸ್ ಕಚೇರಿಗಳ ನಿರ್ಮಾಣ ಕಾರ್ಯದ ಶಂಕುಸ್ಥಾಪನೆಗೆ ಪಕ್ಷದ ವರಿಷ್ಠರನ್ನು ಆಹ್ವಾನಿಸಲು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ