ರಾಜಕೀಯ ಎನ್ನುವುದು ಚದುರಂಗದಾಟ ಎಂದು ಕೆಲವರು ಭಾವಿಸಿದ್ದಾರೆ. ಇಂದಿರಾಗಾಂಧಿ ಅವರು ಈ ರೀತಿಯ ರಾಜಕೀಯ ಮಾಡಲಿಲ್ಲ. ಯಾವುದೇ ಭಯ ಇಲ್ಲದೇ ಸಮಾಜದ ಹುಳುಕು, ತಾರತಮ್ಯ, ಅನ್ಯಾಯವನ್ನು ಜನರಿಗೆ ತಿಳಿಸಬೇಕು. ಅನ್ಯಾಯದ ಬಗ್ಗೆ ಪ್ರಶ್ನಿಸಿದರೆ ನಮ್ಮ ಮೇಲೆ ದಾಳಿ, ದೌರ್ಜನ್ಯ ಆಗಬಹುದು.
ಸಶಕ್ತ ಮಹಿಳೆಯರು ದೇಶದ ಹಣೆಬರಹವನ್ನೇ ಬದಲಿಸುವಷ್ಟು ಸಬಲರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲು ಜಾರಿ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.