ಶಿರಾಡಿಯಲ್ಲಿ ಅನಿರ್ದಿಷ್ಟಾವಧಿ ರೈಲು ಸಂಚಾರ ಬಂದ್
Aug 11 2024, 01:39 AM IST ಸಕಲೇಶಪುರ ಪಟ್ಟಣದ ಆಚಂಗಿ ಗ್ರಾಮ ಸಮೀಪ ರೈಲ್ವೆಹಳಿಯ ಮೇಲೆ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ ಪರಿಣಾಮ ಆರು ರೈಲುಗಳ ಸಂಚಾರವನ್ನು ಅನಿರ್ದಿಷ್ಟಾವಧಿಯವರಗೆ ತಡೆಹಿಡಿಯಲಾಗಿದೆ. ಮಧ್ಯರಾತ್ರಿ ಗುಡ್ಡ ಕುಸಿದಿದ್ದರಿಂದ ಮೂರು ರೈಲುಗಳ ಸಂಚಾರವನ್ನು ಮಾರ್ಗಮಧ್ಯೆ ತಡೆಹಿಡಿಯಲಾಗಿದ್ದು ಇನ್ನೂ ಮೂರು ರೈಲುಗಳ ಸಂಚಾರವನ್ನು ಆರಂಭದಲ್ಲೆ ತಡೆಹಿಡಿಯಲಾಗಿದೆ. ಮಂಗಳೂರಿನಿಂದ ಬೆಂಗಳೂರಿನೆಡೆಗೆ ಸಂಚರಿಸುತ್ತಿದ್ದ ರೈಲನ್ನು ಸಕಲೇಶಪುರ ರೈಲು ನಿಲ್ದಾಣದಲ್ಲಿ ತಡೆಹಿಡಿಯಲಾದರೆ, ಬೆಂಗಳೂರಿನಿಂದ ಮಂಗಳೂರಿನೆಡೆಗೆ ಚಲಿಸುತ್ತಿದ್ದ ರೈಲುಗಳನ್ನು ಆಲೂರು ಹಾಗೂ ಹಾಸನ ರೈಲ್ವೆ ನಿಲ್ದಾಣದಲ್ಲಿ ತಡೆಯಡಿಯಲಾಗಿತ್ತು. ಈ ಮೂರು ರೈಲುಗಳಲ್ಲಿದ್ದ ಸಾವಿರಾರು ಮಂದಿ ರೈಲಿನಲ್ಲೆ ರಾತ್ರಿ ಕಳೆದರು.