• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಹಳಿಯ ಮೇಲೆ ಬಿದ್ದ ದೈತ್ಯಾಕಾರದ ಬಂಡೆ

Jun 22 2025, 01:18 AM IST
ಸಕಲೇಶಪುರ ತಾಲೂಕಿನ ಯಡಕುಮಾರಿ ಬಳಿ ರೈಲ್ವೆ ಹಳಿಯ ಮೇಲೆ ದೈತ್ಯಾಕಾರದ ಬಂಡೆಗಳು ಮತ್ತು ಗುಡ್ಡ ಕುಸಿತವಾಗಿರುವ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿತು. ಬಂಡೆಗಳ ಉರುಳಿಕೆಯಿಂದ ರೈಲ್ವೆ ಹಳಿಗೆ ಹಾನಿಯಾಗಿದ್ದು, ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ಮಧ್ಯರಾತ್ರಿಯಿಂದ ರೈಲುಗಳು ನಿಲುಗಡೆಗೊಂಡವು. ನೂರಾರು ಪ್ರಯಾಣಿಕರು ನಿಲ್ದಾಣದಲ್ಲಿ ಕಾಲಕಳೆದರೆ, ಕೆಲವರು ಬೇರೆ ವಾಹನಗಳಲ್ಲಿ ತೆರಳಿದರು. ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಕಾಫಿ, ತಿಂಡಿ, ಶೌಚಾಲಯ, ಕುಡಿಯುವ ನೀರು ಮುಂತಾದ ಸೌಲಭ್ಯಗಳನ್ನು ಒದಗಿಸಿದರು.

ರೈಲ್ವೆ ಮಾರ್ಗದ ಕಾಮಗಾರಿ ಶೀಘ್ರ ಆರಂಭ

Jun 21 2025, 12:49 AM IST
ಬೇಲೂರು-ಚಿಕ್ಕಮಗಳೂರು ರೈಲು ಮಾರ್ಗದ ಕೆಲಸ ಶೀಘ್ರವಾಗಿ ಮಾಡುತ್ತೇವೆ. ಹಾಸನ-ಬೇಲೂರು ನಡುವೆ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಮುಗಿಸಿ ಇನ್ನು ಎರಡೂವರೆ ಮೂರು ವರ್ಷಗಳಲ್ಲಿ ಈ ಕಾಮಗಾರಿ ಮುಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದರು. ಹಿಂದೆ ಯುಪಿಎ ಸರ್ಕಾರ ಇದ್ದಾಗ 850ರಿಂದ 900 ಕೋಟಿ ರು. ಅನುದಾನ ಬರುತಿತ್ತು. ಈಗ ಆರರಿಂದ ಏಳು ಸಾವಿರ ಕೋಟಿ ಅನುದಾನ ಬರುತ್ತಿದೆ. ರಾಜ್ಯ ಕೇಂದ್ರ ಸಹಭಾಗಿತ್ವದ ಯೋಜನೆಗೆ ಸಿದ್ದರಾಮಯ್ಯ ಅವರಿಂದ ಒಳ್ಳೆ ಸಹಕಾರ ಸಿಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವನ್ಯಜೀವಿ ಸಂರಕ್ಷಣೆಗೆ ಅರಣ್ಯ- ರೈಲ್ವೆ ಇಲಾಖೆಗಳ ಜಂಟಿ ಕಾರ್ಯ

Jun 20 2025, 12:34 AM IST
ರೈಲು ಹಳಿಗಳ ಮಧ್ಯೆ ಪ್ರಾಣಿಗಳು ಸಾವನ್ನಪ್ಪಬಾರದೆಂಬ ಕಾರಣಕ್ಕೆ ರೈಲ್ವೆ ವಲಯವು ಅರಣ್ಯ ಇಲಾಖೆಯೊಂದಿಗೆ ಸಭೆ ನಡೆಸಿದೆ. 2 ಇಲಾಖೆ ಸೇರಿಕೊಂಡು ಹಲವು ಕ್ರಮ ಕೈಗೊಂಡಿವೆ. ಆನೆ, ಚೀತಾ, ಕಾಡುಹಂದಿ, ಚಿರತೆ, ಝಿರಾಫೆ ಸೇರಿದಂತೆ ವನ್ಯಜೀವಿಗಳು ಎಲ್ಲೆಲ್ಲಿ ಸಂಚರಿಸುತ್ತವೆ ಎಂದು ಜಾಗೆಗಳನ್ನು ಗುರುತಿಸಿವೆ.

ಬೆಂಗಳೂರು ಸುತ್ತಲ 8 ರೈಲ್ವೆ ಮಾರ್ಗಗಳ ಸ್ಥಳ ಸಮೀಕ್ಷೆ ನಡೆಸಿದ್ದು : ಅಶುತೋಷ್ ಕುಮಾರ್ ಸಿಂಗ್

Jun 20 2025, 12:34 AM IST
ಬೆಂಗಳೂರು ಸುತ್ತಲಿನ ಎಂಟು ರೈಲ್ವೆ ಮಾರ್ಗಗಳನ್ನು ಜೋಡಿಹಳಿ, ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ವಿಸ್ತ್ರತ ಯೋಜನಾ ವರದಿಯನ್ನು ಶೀಘ್ರವೇ ರೈಲ್ವೆ ಮಂಡಳಿಗೆ ಸಲ್ಲಿಸಲಾಗುವುದು ಎಂದು ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ತಿಳಿಸಿದರು.

ರೈಲ್ವೆ ಸ್ಟೇಷನ್ ಕಟ್ಟಡ ಕಾಮಗಾರಿ ವಿಳಂಬ

Jun 19 2025, 11:49 PM IST
ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ಆರಂಭಗೊಂಡಿರುವ ರೈಲ್ವೆ ಸ್ಟೇಷನ್ ನ ನೂತನ ಕಟ್ಟಡ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳ ವಿರುದ್ಧ ಸಂಸದ ಗೋವಿಂದಕಾರಜೋಳ ಕಿಡಿಕಾರಿ ಬರುವ ಡಿ.31ಕ್ಕೆ ಉದ್ಘಾಟನೆಯಿಟ್ಟುಕೊಳ್ಳಿ ಎಂದು ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಕೆ.ಆರ್‌. ಪುರ ಸಮೀಪ ರೈಲ್ವೆ ಪರ್ಯಾಯ ರಸ್ತೆಯಲ್ಲಿ 3 ತಿಂಗಳು ಸಂಚಾರ ನಿರ್ಬಂಧ

Jun 15 2025, 06:14 AM IST

ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಕೆ.ಆರ್‌. ಪುರದ ಸಮೀಪ ರೈಲ್ವೆ ಪರ್ಯಾಯ ರಸ್ತೆಯಲ್ಲಿ 3 ತಿಂಗಳು ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.

ವರ್ತುಲ ರೈಲ್ವೆ ಯೋಜನೆಗೆ 2,500 ಎಕರೆ ಭೂಸ್ವಾದೀನ

Jun 08 2025, 09:49 AM IST

ಬೆಂಗಳೂರು ವರ್ತುಲ ರೈಲ್ವೆ (287ಕಿಮೀ) ಯೋಜನೆ ಅನುಷ್ಠಾನಕ್ಕೆ 2,500 ಎಕರೆ ಭೂಸ್ವಾದೀನ ಆಗಬೇಕಿದ್ದು, ವಶಕ್ಕೆ ಪಡೆವ ಭೂಮಿಗೆ ರೈಲ್ವೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡಲಾಗುವುದು

ಕುಷ್ಟಗಿ ರೈಲ್ವೆ ನಿಲ್ದಾಣಕ್ಕೆ ಬಸ್ ಸಂಚಾರ ಆರಂಭ

Jun 06 2025, 01:18 AM IST
ಕುಷ್ಟಗಿಯಿಂದ ಹುಬ್ಬಳ್ಳಿಗೆ ಮೇ 15ರಂದು ರೈಲು ಸಂಚಾರ ಆರಂಭಿಸಿದ್ದು ಪಟ್ಟಣದಿಂದ 2 ಕಿಲೋ ಮೀಟರ್‌ ದೂರದಲ್ಲಿ ರೈಲ್ವೆ ನಿಲ್ದಾಣವಿದೆ. ಹೀಗಾಗಿ ಬಸ್‌ ಸೌಲಭ್ಯ ಕಲ್ಪಿಸಬೇಕೆಂದು ಪ್ರಯಾಣಿಕರು ಬೇಡಿಕೆ ಇಟ್ಟ ಹಿನ್ನೆಲೆ ಸಂಚಾರ ಆರಂಭಿಸಲಾಗಿದೆ.

ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್‌ ಇಂದು ಲೋಕಾರ್ಪಣೆ

Jun 06 2025, 12:28 AM IST
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಿನಾಬ್ ನದಿಗೆ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ, ಜಮ್ಮುವಿವ ಶ್ರೀಕ್ಷೇತ್ರ ವೈಷ್ಣೋದೇವಿ ನಿಹದ ಕಟ್ರಾದಲ್ಲಿ ಕಟ್ರಾ-ಶ್ರೀನಗರ ವಂದೇಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ರೈಲ್ವೆ ಮಾರ್ಗ ಪ್ರಾರಂಭದ ಹಂತಕ್ಕೆ ತಂದೇ ತರುವೆ

Jun 01 2025, 02:38 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಆಲಮಟ್ಟಿ-ಯಾದಗಿರಿ ರೈಲ್ವೆ ಮಾರ್ಗ ಆಗಬೇಕೆಂಬ ಕನಸ್ಸು ನಿನ್ನೆ ಮೊನ್ನೆಯದಲ್ಲ. ಈ ಕಾರ್ಯದ ಯಶಸ್ವಿಗೆ ಕೇಂದ್ರ ರೈಲ್ವೆ ಸಚಿವರಾದ ವೈಷ್ಣವ ಅವರೊಂದಿಗೆ ಮಾತನಾಡಿದ್ದೇನೆ. ಈ ಕಾರ್ಯ ಯಶಸ್ವಿಗೆ ಒತ್ತಡವನ್ನು ಹಾಕಿದ್ದೇನೆ. ಸರ್ವೆ ಕಾರ್ಯ ಯಶಸ್ವಿಯಾಗುವದರ ಜೊತೆಗೆ ಆಲಮಟ್ಟಿ-ಯಾದಗಿರಿ ರೈಲ್ವೆ ಮಾರ್ಗ ಪ್ರಾರಂಭಿಸುವ ಹಂತಕ್ಕೆ ತಂದೆ ತರುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಭರವಸೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved