ರೈಲ್ವೆ ಹಳಿಯ ಮೇಲೆ ಬಿದ್ದ ದೈತ್ಯಾಕಾರದ ಬಂಡೆ
Jun 22 2025, 01:18 AM ISTಸಕಲೇಶಪುರ ತಾಲೂಕಿನ ಯಡಕುಮಾರಿ ಬಳಿ ರೈಲ್ವೆ ಹಳಿಯ ಮೇಲೆ ದೈತ್ಯಾಕಾರದ ಬಂಡೆಗಳು ಮತ್ತು ಗುಡ್ಡ ಕುಸಿತವಾಗಿರುವ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿತು. ಬಂಡೆಗಳ ಉರುಳಿಕೆಯಿಂದ ರೈಲ್ವೆ ಹಳಿಗೆ ಹಾನಿಯಾಗಿದ್ದು, ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ಮಧ್ಯರಾತ್ರಿಯಿಂದ ರೈಲುಗಳು ನಿಲುಗಡೆಗೊಂಡವು. ನೂರಾರು ಪ್ರಯಾಣಿಕರು ನಿಲ್ದಾಣದಲ್ಲಿ ಕಾಲಕಳೆದರೆ, ಕೆಲವರು ಬೇರೆ ವಾಹನಗಳಲ್ಲಿ ತೆರಳಿದರು. ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಕಾಫಿ, ತಿಂಡಿ, ಶೌಚಾಲಯ, ಕುಡಿಯುವ ನೀರು ಮುಂತಾದ ಸೌಲಭ್ಯಗಳನ್ನು ಒದಗಿಸಿದರು.