ವಕ್ಫ್ ತಿದ್ದುಪಡಿ ಮಸೂದೆ ಇದೀಗ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಮಸೂದೆಯ ಸಿಂಧುತ್ವ ಪ್ರಶ್ನಿಸಿ ವಕ್ಫ್ ಮಸೂದೆ ಕುರಿತಾದ ಜೆಪಿಸಿಯ ಸದಸ್ಯರೂ ಆಗಿದ್ದ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆಗೆ ಸಂಸತ್ನ ಅನುಮೋದನೆ ಸಿಕ್ಕಬೆನ್ನಲ್ಲೇ, ದೇಶವ್ಯಾಪಿ ಮುಸ್ಲಿಮರು ಬೀದಿಗಿಳಿದ ಪ್ರತಿಭಟನೆ ನಡೆಸಿದ್ದಾರೆ ಹಲವು ನಗರಗಳಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಭರ್ಜರಿ ವಾಕ್ಸಮರದ ಬಳಿಕ ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ‘ಉಮೀದ್’ ಅಂಗೀಕಾರವಾಗಿದೆ. ಈ ಮಸೂದೆಯನ್ನು ರೂಪಿಸಿದ್ದು ಏಕೆ? ಅದರ ಪ್ರಯೋಜನ ಏನು? ಹಳೆ ಕಾಯ್ದೆಗೂ ಹೊಸ ಶಾಸನಕ್ಕೂ ಏನು ವ್ಯತ್ಯಾಸ ಎಂಬುದರ ಕಿರು ಚಿತ್ರಣ ಇಲ್ಲಿದೆ.
ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದ್ದು, ಕಾಂಗ್ರೆಸ್ ಪಕ್ಷ ವಕ್ಫ್ ಕಾಯ್ದೆ ತಿದ್ದುಪಡಿಯನ್ನು ರಾಜ್ಯ ಮತ್ತು ದೇಶದಲ್ಲಿ ವಿರೋಧಿಸುವುದು ಒಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ವಕ್ಫ್ ಮಂಡಳಿಯ ಆಡಳಿತದಲ್ಲಿ ಪಾರದರ್ಶಕತೆ ತರುವ, ಮಂಡಳಿಯಲ್ಲಿ ಎಲ್ಲರಿಗೂ ಅವಕಾಶ ನೀಡುವ, ಅದರ ಸರ್ವಾಧಿಕಾರಕ್ಕೆ ಕತ್ತರಿ ಹಾಕುವ ಬಹುನಿರೀಕ್ಷಿತ ವಕ್ಫ್ ತಿದ್ದುಪಡಿ ವಿಧೇಯಕಕ್ಕೆ ಸಂಸತ್ತಿನ ಅನುಮೋದನೆ ಸಿಗುವ ಕ್ಷಣ ಸನ್ನಿಹಿತವಾಗಿದೆ.
ವಕ್ಫ್ ಮಂಡಳಿಯ ಭೂಕಬಳಿಕೆ ವಿರೋಧಿಸಿ ಕಳೆದ 173 ದಿನಗಳಿಂದ ಹೋರಾಟ ನಡೆಸಿಸುತ್ತಿದ್ದ ಕೇರಳದ ಮುನಬಂ ಗ್ರಾಮಸ್ಥರು ಲೋಕಸಭೆಯಲ್ಲಿ ಮಂಗಳವಾರ ತಡರಾತ್ರಿ ಮಸೂದೆ ಅಂಗೀಕಾರವಾಗುತ್ತಿದಂತೆ ಸಂಭ್ರಮಿಸಿದ್ದು, ‘ ನರೇಂದ್ರ ಮೋದಿ ಜಿಂದಾಬಾದ್’ ಎಂದು ಪ್ರಧಾನಿಗೆ ಜೈಕಾರ ಕೂಗಿದ್ದಾರೆ.