ಸಕಲೇಶಪುರ ವಿಜಯಪುರ ಬಸ್ಗೆ ಶಾಸಕ ಮಂಜು ಚಾಲನೆ
Aug 20 2024, 12:50 AM ISTಸಕಲೇಶಪುರದಿಂದ ವಿಜಯಪುರಕ್ಕೆ ಆರಂಭವಾಗಿರುವ ನೂತನ ಬಸ್ಗೆ ಶಾಸಕರು ಹಸಿರು ಧ್ವಜ ತೋರಿಸುವ ಮುಖಾಂತರ ಚಾಲನೆ ನೀಡಿ ಮಾತನಾಡಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಹೊಸ ಬಸ್ನ್ನು ಸಕಲೇಶಪುರ ಡಿಪೋದಿಂದ ವಿಜಯಪುರಕ್ಕೆ ಬಿಡಲಾಗುತ್ತಿದೆ. ಈ ಬಸ್ನಿಂದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಪ್ರತಿ ದಿನ ಪಟ್ಟಣದಿಂದ ಮಧ್ಯಾಹ್ನ ೧೨.೩೦ರ ವೇಳೆಗೆ ಬಿಡುವ ಈ ಬಸ್ ಮರುದಿನ ಮುಂಜಾನೆ ೬ ಗಂಟೆಗೆ ವಿಜಯಪುರ ತಲುಪುತ್ತದೆ ಎಂದರು.