ಸೃಜನಶೀಲತೆಯಿಂದ ವಿದ್ಯಾರ್ಥಿ ಜೀವನದಲ್ಲಿ ಬೆಳಕು: ಡಾ.ಎಂ.ಸಿ. ಪ್ರಕಾಶ್
Dec 14 2023, 01:30 AM ISTಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಕಾಲೇಜಿನಲ್ಲಿ ಶೈಕ್ಷಣಿಕ ಚುಟವಟಿಕೆಗಳ ಉದ್ಘಾಟನಾ ಸಮಾರಂಭಕನ್ನಡಪ್ರಭ ವಾರ್ತೆ ತಿಪಟೂರುವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಸೃಜನಶೀಲತೆಯು ಅನಾವರಣಗೊಂಡಾಗ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಬೆಳಕನ್ನು ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಹಿಂಜರಿಕೆ, ಭಯದ ಭಾವನೆಗಳನ್ನು ಬಿಟ್ಟು ಆತ್ಮ ಮನೋಬಲದಿಂದ ಉತ್ತಮ ಶಿಕ್ಷಣ ಪಡೆದು ಪರಿಪೂರ್ಣ ವ್ಯಕ್ತಿತ್ವನ್ನು ರೂಪಿಸಿಕೊಳ್ಳಬೇಕೆಂದು ಬೆಂಗಳೂರು ವಿವಿಎಸ್ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಡಾ.ಎಂ.ಸಿ. ಪ್ರಕಾಶ್ ತಿಳಿಸಿದರು.