ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಭೇಟಿ
May 19 2025, 02:21 AM ISTಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡಸಿ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿನಿಯರ ಕೋರಿಕೆಗೆ ಮೇರಿಗೆ ವಸತಿ ನಿಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವತ್ತಿರುವ ಕೋರ್ಸ್ಗಳಿಗೆ ಸಂಬಂದಿಸಿದ ಪುಸ್ತಕಗಳನ್ನು ಒದಗಿಸುವಂತೆ ಸೂಚಿಸಿದರು. ವಿದ್ಯಾರ್ಥಿನಿಯರು ಸರ್ಕಾರದ ಈ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ತಮ್ಮ ಗುರಿ ಸಾಧಿಸಿ,ಸ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ತಿಳಿಸಿದರು.