ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದು, ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಇತರೆ ಮೆಟ್ರೋ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯ, ರಿಯಾಯಿತಿ ನೀಡಲಾಗಿದೆ. ಆದರೆ ಇಡೀ ದೇಶದಲ್ಲಿ ಅತ್ಯಂತ ದುಬಾರಿ ಟಿಕೆಟ್ ದರ ವಿಧಿಸುವ ‘ನಮ್ಮ ಮೆಟ್ರೋ’ದಲ್ಲಿ ಮಾತ್ರ ಯಾವುದೇ ಸೌಲಭ್ಯ ಇಲ್ಲ. ಹಾಗಾಗಿ ಬಿಎಂಆರ್ಸಿಎಲ್ ಸಹ ಪ್ರಯಾಣಿಕರಿಗೆ ಸೌಲಭ್ಯ ಒದಗಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ.
ಸದ್ಯದಲ್ಲೇ ವಾರ್ಷಿಕ ಪರೀಕ್ಷೆಗೆ ಸಜ್ಜುಗೊಳ್ಳುತ್ತಿರುವ ಮಕ್ಕಳ ಜತೆಗೆ ಪ್ರಧಾನಿ ಮೋದಿ, ನಟಿ ದೀಪಿಕಾ ಪಡುಕೋಣೆ ಬಳಿಕ ಇದೀಗ ಆಧ್ಯಾತ್ಮ ಗುರು ಸದ್ಗುರು ಅವರು ನಡೆಸಿದ ಪರೀಕ್ಷಾ ಪೇ ಚರ್ಚೆ ಸಂವಾದ ಶನಿವಾರ ಪ್ರಸಾರ ಮಾಡಲಾಯಿತು.