ಶಾಲಾ ಮಾನ್ಯತೆ ನವೀಕರಣಕ್ಕಿರುವ ಕಠಿಣ ಮಾನದಂಡಗಳು, ಅಧಿಕಾರಿಗಳ ದೌರ್ಜನ್ಯ, ಲಂಚ ಬೇಡಿಕೆಯಿಂದ ಶಾಲೆಗಳನ್ನು ನಡೆಸುವುದು ಕಷ್ಟವಾಗಿದ್ದು, ಈ ಸಮಸ್ಯೆಯನ್ನು ಗಮನಕ್ಕೆ ತಂದರೂ ಸರ್ಕಾರ ಪರಿಹರಿಸದೇ ಇರುವುದನ್ನು ಖಂಡಿಸಿ, ವಿವಿಧ ಖಾಸಗಿ ಶಾಲಾ ಸಂಘಟನೆಗಳು ಆ. 15ರಂದು ಕರಾಳ ದಿನ ಆಚರಣೆಗೆ ತೀರ್ಮಾನಿಸಿವೆ.