ಪದವಿಪೂರ್ವ ಶಿಕ್ಷಣ ಇಲಾಖೆ ಪರಿಕಲ್ಪನೆ ಕರ್ನಾಟಕದಲ್ಲಿ ಮಾತ್ರ

Nov 30 2024, 12:46 AM IST
ಇಡೀ ದೇಶದಲ್ಲಿ ಯಾವ ರಾಜ್ಯದಲ್ಲಿ ಇಲ್ಲದಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಪರಿಕಲ್ಪನೆ ಕರ್ನಾಟಕದಲ್ಲಿ ಮಾತ್ರ ಇದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ ಶ್ಲಾಘನೆ ವ್ಯಕ್ತಪಡಿಸಿದರು. ಗಣಿತಶಾಸ್ತ್ರದ ಪ್ರಾಧ್ಯಾಪಕ ವಾಸುದೇವ್ ಅವರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದನ್ನು ಸ್ವಾಗತಿಸುತ್ತೇನೆ. ಸುಮ್ಮನೆ ಅನುಷ್ಠಾನಕ್ಕಾಗಿ ಯೋಜನೆಗಳಲ್ಲ. ಅನುಷ್ಠಾನದಿಂದ ಆಗುವ ಪ್ರಯೋಜನಗಳು ಸಂಗತಿ ಬಗ್ಗೆ ಮನಸ್ಸಿನಲ್ಲಿಟ್ಟುಕೊಂಡು ಯೋಚನೆ ಮಾಡಬೇಕು. ಯಾವ ಜಿಲ್ಲೆಯಲ್ಲಿಯೂ ಇಲ್ಲದಿರುವ ಕ್ರಿಯಾಶೀಲತೆ ಹಾಸನ ಜಿಲ್ಲೆಯ ಪದವಿಪೂರ್ವ ಶಿಕ್ಷಕ ಮಿತ್ರರಲ್ಲಿದೆ ಎಂದು ಹೇಳಿದರು.