ಶಿಕ್ಷಣ ಕ್ಷೇತ್ರ ಬಹಳ ಪವಿತ್ರವಾದುದು. ಇಲ್ಲಿಗೆ ಶಿಕ್ಷಕರು, ಮಕ್ಕಳು ಶಿಸ್ತಿನಿಂದ ಬರಬೇಕು ಎನ್ನುತ್ತೇವೆ. ಆದ್ದರಿಂದ ಶಿಕ್ಷಣ ಸಚಿವರೂ ನೀಟ್ ಆಗಿ, ಶಿಸ್ತಿನಿಂದ ಇರಬೇಕು ಎಂದು ಮಕ್ಕಳ ಪೋಷಕರು ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.