ಸಂವಿಧಾನ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸಿ: ಮೋಹನ ಕೊರಡ್ಡಿ

Feb 12 2024, 01:35 AM IST
ಲೋಕಾಪುರ: ಸಂವಿಧಾನ ದಿನ ನಿಮಿತ್ತ ನಡೆಯಲಿರುವ ಸಂವಿಧಾನ ಜಾಗೃತಿ ಜಾಥಾ ಪಟ್ಟಣದಲ್ಲಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣಾಧಿಕಾರಿ ಮೋಹನ ಕೊರಡ್ಡಿ ಹೇಳಿದರು. ಪಟ್ಟಣ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್‌ ಶ್ರೇಷ್ಠ ಸಂವಿಧಾನ ಕೊಟ್ಟಿದ್ದರಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸಹೋದರತ್ವದಿಂದ ಎಲ್ಲರೂ ಬಾಳುತ್ತಿದ್ದೇವೆ. ಸದೃಢ ಭಾರತಕ್ಕಾಗಿ ಸಂವಿಧಾನದ ಕುರಿತು ಪ್ರತಿಯೊಬ್ಬರಲ್ಲಿ ಅರಿವು ಮೂಡಿಸುವುದೇ ಜಾಥಾ ಉದ್ದೇಶ, ಪಟ್ಟಣದಲ್ಲಿ ಫೆ.೨೨ರಂದು ನಡೆಯಲಿರುವ ಕಾಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದರು.