ರಾಜ್ಯ ರಾಜಕಾರಣದಲ್ಲಿ ಜಂಪಿಂಗ್ ಸ್ಟಾರ್ ಎಂದೇ ಹೆಸರುವಾಸಿಯಾಗಿರುವ ಸಿ.ಪಿ.ಯೋಗೇಶ್ವರ್, ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ತಮ್ಮ 25 ವರ್ಷಗಳ ರಾಜಕೀಯ ಜೀವನದಲ್ಲಿ 5ನೇ ಬಾರಿಗೆ ಪಕ್ಷಾಂತರ ಮಾಡಿದ್ದಾರೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಅವರು ಗುರುವಾರ ಬೆಳಗ್ಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ನಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುವಂತೆ ಕಾರ್ಯಕರ್ತರು, ಮುಖಂಡರಿಂದ ತೀವ್ರ ಒತ್ತಡವಿದೆ. ಆಕಾಂಕ್ಷಿತರ ಪಟ್ಟಿಯಲ್ಲಿ ಪುಟ್ಟಣ್ಣ, ಅಶ್ವಥ್, ರಘುನಂದನ್ ಹೆಸರುಗಳೂ ಇವೆ. ನೂರಕ್ಕೆ ನೂರು ಡಿ.ಕೆ.ಸುರೇಶ್ ಅವರನ್ನೇ ಕಣಕ್ಕಿಳಿಸಬೇಕೆಂದು ತೀವ್ರ ಒತ್ತಾಯವಿದೆ.