ಬರಕ್ಕೆ ಸ್ಪಂದಿಸುವ ಬದಲು ಶ್ರೀ ರಾಮನ ಹೆಸರಿನಲ್ಲಿ ಕಾಲಹರಣ: ಸಚಿವ ಆರ್‌.ಬಿ.ತಿಮ್ಮಾಪುರ

Jan 16 2024, 01:46 AM IST
ಮುಧೋಳ: ಬರಗಾಲದಿಂದ ತತ್ತರಿಸಿದ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಬಿಡಿಗಾಸು ನೀಡಿಲ್ಲ. ಜನರ ಸಂಕಷ್ಟಕ್ಕೆ ಸಹಾಯ ಮಾಡಬೇಕಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶ್ರೀ ರಾಮನ ಹೆಸರಿನಲ್ಲಿ ಜಪ-ತಪದಲ್ಲಿ ಕಾಲಹರಣ ಮಾಡುತ್ತಿದೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಕಿಡಿಕಾರಿದರು. ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಕಾಲಕ್ಕೆ ಮಳೆ ಆಗದೆ ಬರಗಾಲಕ್ಕೆ ತುತ್ತಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸಹಾಯ ಮಾಡಬೇಕಾದವರು ಶ್ರೀ ರಾಮನ ಜಪದಲ್ಲಿ ಮಗ್ನರಾಗಿದ್ದಾರೆ ಮತ್ತು ಯುವಕರ ಬುದ್ಧಿವಂತಿಕೆ ಶಕ್ತಿ ಮೇಲೆ ಉದ್ಯೋಗ ನೀಡಬೇಕಾದ ಸರ್ಕಾರ ಇಂದು ರಾಜಕೀಯವಾಗಿ ಶ್ರೀ ರಾಮನ ಜಪ ತಪದಲ್ಲಿದ್ದಾರೆ ಎಂದು ಟೀಕಿಸಿದರು.