ಕೂಲಿ ಕಲ್ಪಿಸಲು ನರೇಗಾ ಯೋಜನೆ ಸದ್ಬಳಕೆಯಾಗಲಿ: ಸಚಿವ ಮಧು

Dec 02 2023, 12:45 AM IST
ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದು ಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆ ಗಂಗೆ ಮೂಲಕ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಸಲಾಗುತ್ತದೆ. ಯಾವ್ಯಾವ ಗ್ರಾಮಗಳು ಯೋಜನೆಯಲ್ಲಿ ಕೈಬಿಟ್ಟು ಹೋಗಿದೆಯೋ ಅಂತಹ ಪ್ರದೇಶಗಳ ಪಟ್ಟಿ ಮಾಡಿಕೊಡಿ. ಜನರಿಗೆ ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆ ಆಗಬಾರದು ಎಂದ ಅವರು, ಕೆಲವೆಡೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪಡವಗೋಡು ಗ್ರಾಪಂನ ಕೆಲವು ಗ್ರಾಮಗಳಲ್ಲಿ 3 ತಿಂಗಳಿನಿಂದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ತಕ್ಷಣ ಸರಿಪಡಿಸಿ ಎಂದು ತಾಕೀತು ಮಾಡಿದರು.