ನಮಗೂ ನರೇಂದ್ರಸ್ವಾಮಿ ಮಂತ್ರಿ ಆಗಬೇಕು ಎನ್ನುವ ಆಸೆ ಇದ್ದು, ಅವರ ಬೆಂಬಲಕ್ಕೆ ಇದ್ದೇವೆ. ಈ ಬಾರಿ ಅವರಿಗೆ ಮಂತ್ರಿ ಸ್ಥಾನ ಸಿಗುತ್ತೆ ಎನ್ನುವ ವಿಶ್ವಾಸವಿದೆ. ನರೇಂದ್ರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ನೀಡುವುದು ನಮ್ಮ ಕೈಯಲ್ಲಿಲ್ಲ.
ಕಾಂಗ್ರೆಸ್ನ 60 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಾಲಿಶ. 60 ಮಂದಿಯಲ್ಲ ಆರು ಮಂದಿ ಕೂಡ ಸೇರುವುದಿಲ್ಲ. ಬಿಜೆಪಿ, ಜೆಡಿಎಸ್ ಶಾಸಕರೇ 25 ಮಂದಿ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ಕೆಲವರು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಯಾರಿಗೆ ಏನೇ ಅಸಮಾಧಾನ ಇದ್ದರೂ ಅದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿವಿಮಾತು ಹೇಳಿದ್ದಾರೆ.
ವ್ಯವಸ್ಥೆಯಲ್ಲಿನ ಭ್ರಷ್ಠಾಚಾರ ನಿಯಂತ್ರಣಕ್ಕೆ ದಾಖಲೆಗಳ ಡಿಜಟಲೀಕರಣ ಯೋಜನೆ ಅತ್ಯಂತ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.