ಗುರುವಾರ ಸಂಜೆ ಸಚಿವ ಸಂಪುಟ ಸಭೆ ಮುಗಿದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಡಿನ್ನರ್ ಪಾರ್ಟಿ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್ನಲ್ಲಿನ ಬಣ ರಾಜಕೀಯ ಜೋರಾಗಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದಾರೆ.
ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ನಡೆಯುತ್ತಿದ್ದು, ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ. ದೆಹಲಿಯಿಂದ ಪಟ್ಟಿ ಬಂದರೆ ಕಥೆ ಮುಗಿಯಿತು. ಮನೆ ಖಾಲಿ ಮಾಡಿಕೊಂಡು ಹೋಗಬೇಕು ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್ ಸೈಲ್ ಸೇರಿ ಇತರೆ ಅಪರಾಧಿಗಳ ವಿರುದ್ಧದ ಶಿಕ್ಷೆ ಪ್ರಮಾಣ ಘೋಷಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.
ನಮ್ಮ ತಂದೆ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯವಾಗಿದೆ. ಸಮಯ, ಸಂದರ್ಭ ಬರಲಿ. ಆಗ ನೋಡೋಣ ಎಂದು ಅವರ ಪುತ್ರಿ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಎಐಸಿಸಿ ವರಿಷ್ಠರ ಭೇಟಿ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಗಮನ ಸೆಳೆದಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಭೇಟಿ ಮಾಡಿದ್ದಾರೆ.