ನೀರು ಸರಬರಾಜು ನೌಕರರ ಬೇಡಿಕೆ ಈಡೇರಿಸದ ಸರ್ಕಾರ
Oct 04 2025, 12:00 AM ISTನೌಕರರ ಬೇಡಿಕೆಗಳಲ್ಲಿ ನೇರ ನೇಮಕಾತಿ, ನೇರ ಪಾವತಿ ಮತ್ತು ಸೇವಾಭದ್ರತೆ ಪ್ರಮುಖವಾಗಿದ್ದು, ಹಲವು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ಇನ್ನೂ ಭರ್ತಿ ಮಾಡಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಇದುವರೆಗೆ ಯಾವಾಗಲೂ ಮುಷ್ಕರ ಕೈಗೊಂಡಿರದ ನೌಕರರು, ಸರ್ಕಾರದ ವಿಳಂಬ ಧೋರಣೆಯಿಂದ ಬೇಸತ್ತು ಈ ಬಾರಿ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮುದಾಯದ ನೀರಿನ ಪೂರೈಕೆ ಎಂಬ ಅತಿ ಮೂಲಭೂತ ಸೇವೆ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ತಕ್ಷಣವೇ ಸರ್ಕಾರ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈಗಾಗಲೇ ೬೦ ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಂಡಿದ್ದಾರೆ. ಹಲವಾರು ಬಾರಿ ಹಿಂದಿನ ಸರ್ಕಾರಕ್ಕೆ ಮನವಿ ಮಾಡಿದ್ದೆವು, ಈಗಿರುವ ಪೌರಾಡಳಿತ ಸಚಿವರಲ್ಲಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದರು.