ಕುಕನೂರಿಗೆ ಇಂದಿರಾ ಕ್ಯಾಂಟೀನ್ ಮಂಜೂರು-₹1.54 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸರ್ಕಾರ ಆದೇಶ

Dec 08 2023, 01:45 AM IST
ಬಡ ವರ್ಗದವರಿಗೆ, ಹಸಿದವರಿಗೆ ಕಡಿಮೆ ವೆಚ್ಚದಲ್ಲಿ ಊಟ ಸಿಗಲಿ ಎಂದು ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ನಗರ, ಪಟ್ಟಣ ಕೇಂದ್ರಗಳಲ್ಲಿ ಈ ಹಿಂದೆ ಆರಂಭಿಸಿತ್ತು. ಇದರಿಂದ ಶ್ರಮಿಕ ವರ್ಗಕ್ಕೆ ಹಾಗೂ ಬಡ ವರ್ಗಕ್ಕೆ, ಹಸಿದವರಿಗೆ ಕಡಿಮೆ ವೆಚ್ಚದಲ್ಲಿ ಆಹಾರ ಸಿಗುತ್ತಿತ್ತು. ಇನ್ನು ಹಲವೆಡೆ ಕ್ಯಾಂಟೀನ್ ಬೇಡಿಕೆ ಹೆಚ್ಚಿತ್ತು. ಅಂತಹ ಅವಶ್ಯಕ ಕೇಂದ್ರಗಳಲ್ಲಿ ಕುಕನೂರು ಪಟ್ಟಣಕ್ಕೂ ಕ್ಯಾಂಟೀನ್ ಅವಶ್ಯಕತೆ ಇತ್ತು. ನಿತ್ಯ ಪಟ್ಟಣಕ್ಕೆ ವ್ಯಾಪಾರ, ವಹಿವಾಟು, ಶಾಲಾ, ಕಾಲೇಜು, ಎಪಿಎಂಸಿ ಮಾರುಕಟ್ಟೆ, ಕಚೇರಿಗಳಿಗೆ ಬರುವ ಜನರು, ಕಾರ್ಮಿಕರು ಹೀಗೆ ಜನಜಂಗುಳಿಯಿಂದ ಕುಕನೂರು ತುಂಬಿರುತ್ತದೆ. ಹೊಟೆಲ್ ಗಳಲ್ಲಿ ದುಬಾರಿ ಬೆಲೆಗೆ ಆಹಾರ ಸೇವಿಸುವ ಅನಿವಾರ್ಯತೆ ಇತ್ತು. ಈ ಸಮಸ್ಯೆ ನೀಗಿದಂತಾಗಿದೆ.

ಕಾಂತರಾಜ್ ವರದಿ ಜಾರಿಗೆ ರಾಜ್ಯ ಸರ್ಕಾರ ಮೀನಮೇಷ

Dec 08 2023, 01:45 AM IST
ಸಂವಿಧಾನ ಬದ್ಧ ಹಕ್ಕುಗಳನ್ನು ಸರ್ಕಾರ ಕೂಡಲೆ ಪರಿಗಣಿಸಿ ಆದತೆ ಮೇರೆಗೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ವಿಧಾನಸೌಧದಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಹೊರಟಿರುವ ಜಾಥಾ ಗುರುವಾರ ಚಿತ್ರದುರ್ಗಕ್ಕೆ ಆಗಮಿಸಿತು.ಒನಕೆ ಓಬವ್ವ ವೃತ್ತದಲ್ಲಿ ಜಾಥಾವನ್ನು ಸ್ವಾಗತಿಸಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾಂತರಾಜ್ ಆಯೋಗದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳೇ ಕಳೆದಿದ್ದರೂ ಇನ್ನು ಜಾರಿಗೆ ತರುವಲ್ಲಿ ಆಳುವ ಸರ್ಕಾರಗಳು ಮೀನಮೇಷ ಎಣಿಸುತ್ತಿವೆ. ಹಾಗಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಕೂಡಲೇ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ಭ್ರೂಣ ಹತ್ಯೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ

Dec 04 2023, 01:30 AM IST
ಭ್ರೂಣ ಹತ್ಯೆ ಜಾಲವನ್ನು ಪತ್ತೆ ಹಚ್ಚಲು ಮತ್ತು ತಡೆಯಲು ಹಾಗೂ ಪ್ರಕರಣದ ತನಿಖೆಯನ್ನು ಎಸ್.ಐ.ಟಿ ಗೆ ಒಪ್ಪಿಸಲು ತಿರ್ಮಾನಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ತಿಳಿಸಿದರು.ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ಹಾಗೂ ಪತ್ತೆಜಾಲ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಬಳಿ ಚರ್ಚಿಸಲಾಗಿದೆ, ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಈ ಜಾಲವನ್ನು ಪೊಲೀಸರು ಭೇದಿಸಿದ್ದು, ಇದನ್ನು ಸಂಪೂರ್ಣ ತಡೆಗಟ್ಟಲು ಗೃಹ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಕಾನೂನನ್ನು ಜಾರಿಗೆ ತರಲಾಗುವುದು, ಇದು ರಾಜ್ಯದ ಸಮಸ್ಯೆಯಾಗಿದ್ದು, ಈ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.