ಕೃಷ್ಣ ರಾಧೆ ವೇಷಧರಿಸಿ ಕಂಗೊಳಿಸಿದ ಸರ್ಕಾರಿ ಶಾಲೆ ಪುಟಾಣಿಗಳು

Sep 01 2024, 01:47 AM IST
ಹಾಸನ ನಗರದ ಚನ್ನಪಟ್ಟಣದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೪-೨೫ನೇ ಸಾಲಿನಿಂದ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳು ಪ್ರಾರಂಭವಾಗಿದ್ದು, ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊದಲ ವರ್ಷದಿಂದಲೇ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪುಟಾಣಿ ಮಕ್ಕಳು ಕರಷ್ಣ, ರಾಧೆ ವೇಷ ಧರಿಸಿ ಹಾಡಿಗೆ ನೃತ್ಯ ಮಾಡುವ ಮೂಲಕ ನೋಡುಗರ ಗಮನ ಸೆಳೆದಿದ್ದಾರೆ. ಸರ್ಕಾರಿ ಶಾಲೆಯೊಂದು ತನಗೆ ಸಿಗುವ ಅತ್ಯಲ್ಪ ಸಂಪನ್ಮುಲಗಳೊಂದಿಗೆ ಉತ್ತಮವಾಗಿ ಸಾಗುತ್ತಿದೆ.ಈಗ ಸರಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗಿರುವುದು ಇನ್ನು ಪ್ರೋತ್ಸಾಹ ಸಿಕ್ಕಿದಂತಾಗಿದೆ.