ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Jul 06 2025, 01:52 AM IST
ಗ್ರಾಮೀಣ ಪ್ರದೇಶದ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳು ಶೇ.೯೨ಕ್ಕೂ ಹೆಚ್ಚು ಅಂಕ ಪಡೆದಿದ್ದು, ಇವರ ಉನ್ನತ ಶಿಕ್ಷಣಕ್ಕೆ ಪೂರಕವಾದ ಬುನಾದಿ ಹಾಕಿಕೊಡುವಲ್ಲಿ ಶಾಲೆಯ ಮುಖ್ಯ ಶಿಕ್ಷಕರ ಬದ್ಧತೆ ಅಡಗಿದೆ ಎಂದು ಶಿಕ್ಷಕರ ಕಾರ್ಯವನ್ನು ಬಿಇಒ ಸೋಮಲಿಂಗೇಗೌಡ ಅಭಿನಂದಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ೫ ಬಂದ ವಿದ್ಯಾರ್ಥಿಗಳು ಹಾಗೂ ಶೇ. ೮೯ಕ್ಕಿಂತ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಗಳ ೨೨ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ರಷ್ಟು ಫಲಿತಾಂಶ ಪಡೆದ ೪ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ, ಪಾರಿತೋಷಕ ನೀಡಿ ಗೌರವಿಸಲಾಯಿತು.