ಕಳೆದ ಏಳು ವರ್ಷಗಳಿಂದ ನಗರ ವ್ಯಾಪ್ತಿಯಲ್ಲಿ ಸರಿಯಾದ ಅಭಿವೃದ್ಧಿ ಆಗಿಲ್ಲ. ಸರ್ಕಾರದ ಹಂತದಲ್ಲಿ ಯಾವ ಕೆಲಸ ಆಗಬೇಕೋ ನಾನು ಮಾಡಿಸುತ್ತೇನೆ, ಎಲ್ಲರೂ ಕೂಡಿ ನಗರವನ್ನು ಅಭಿವೃದ್ಧಿಪಡಿಸೋಣ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.
ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರ ಬಗ್ಗೆ ಗಮನಹರಿಸಲಿ. ಆಮೇಲೆ ಬೇಕಿದ್ದರೆ ಜೆಡಿಎಸ್ ಶಾಸಕರ ಖರೀದಿ ಬಗ್ಗೆ ಮಾತನಾಡಲಿ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಕುಟುಕಿದರು.
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ್ದು, ಇದು ಅವರ ರಾಜಕೀಯ ಜೀವನದಲ್ಲಿ ಆರನೇ ಗೆಲುವಾಗಿದೆ. ಸತತ ಎರಡು ಸೋಲಿನಿಂದ ಕಂಗೆಟ್ಟಿದ್ದ ಸೈನಿಕ ಕೈಹಿಡಿದು ಗೆಲುವಿನ ಲಹರಿಗೆ ಮರಳಿದ್ದಾರೆ.
ನಾನು ಕಳೆದ ಎರಡು ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೇನೆ. ಆದರೆ, ನನ್ನ ವಿರುದ್ಧ ಗೆಲುವು ಸಾಧಿಸಿದ ಕುಮಾರರಸ್ವಾಮಿ ಏನು ಕೆಲಸ ಮಾಡಿದರು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.