ಪಹಲ್ಗಾಂ ಉಗ್ರರ ದಾಳಿಗೆ ಪ್ರತೀಕಾರವಾಗಿ ಯುದ್ಧ ಸಾರುವುದು ಅನಗತ್ಯ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ನಾಯಕರು ಯುದ್ಧವನ್ನೇ ಸಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಮರ್ಯಾದೆ ಕಳೆಯುತ್ತಿದ್ದಾರೆ. ಇದರಿಂದ ರಾಜ್ಯದ ಘನತೆಗೆ ಧಕ್ಕೆಯಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.