ಪರಿಶಿಷ್ಟ ವರ್ಗದ ಎಲ್ಲಾ ವಸತಿ ಶಾಲೆಗಳು ಮತ್ತು ರಾಯಚೂರು ಜಿಲ್ಲೆಯ ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಯಾವುದೇ ಕ್ಷಣದಲ್ಲಿ ಉಪ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿರುವಾಗಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕರು ಸಂಡೂರಿನಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಸಿ ರಣಕಹಳೆ ಮೊಳಗಿಸಿದ್ದಾರೆ.