ಅಚ್ಚರಿಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ವಿವಾದಕ್ಕೆ ಸಿಲುಕಿರುವ 14 ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ನಿವೇಶನಗಳನ್ನು ಹಿಂತಿರುಗಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಆಗಲು ₹1,200 ಕೋಟಿ ಇಟ್ಟುಕೊಂಡು ಕಾದು ಕೂತವರು ಕಾಂಗ್ರೆಸ್ ಪಕ್ಷದಲ್ಲೂ ಇದ್ದಾರೆ, ಬಿಜೆಪಿಯಲ್ಲೂ ಇದ್ದಾರೆ ಎಂದು ವಿಜಯಪುರ ಕ್ಷೇತ್ರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ರಾಜ್ಯದ ರಾಜಕೀಯ ಇತಿಹಾಸದಲ್ಲಿ ದೇವರಾಜ್ ಅರಸು, ರಾಮಕೃಷ್ಣ ಹೆಗಡೆ, ಬಂಗಾರಪ್ಪ, ವೀರಪ್ಪ ಮೊಯ್ಲಿ ಇವರೆಲ್ಲರೂ ಅಧಿಕಾರದಲ್ಲಿದ್ದಾಗ ತನಿಖೆಯನ್ನು ಎದುರಿಸಿದವರೇ. ಆದರೆ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿಯಾಗಿ ಎಫ್ಐಆರ್ ಹಾಕಿಸಿಕೊಂಡವರು ಇಬ್ಬರು. ಯಡಿಯೂರಪ್ಪ ಮೊದಲನೆಯವರು, ಸಿದ್ದರಾಮಯ್ಯ ನಂತರದವರು.
ಮಾಜಿ ಸಚಿವ ಕೆ.ಬಿ. ಕೋಳಿವಾಡ ನೀಡಿರುವ ಹೇಳಿಕೆ ಅವರ ವೈಯಕ್ತಿಕವಾಗಿದ್ದು. ಅದಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.