• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಲೋಕಾಯುಕ್ತ ವಿಚಾರಣೆ ಎದುರಿಸಲೇಬೇಕು: ಜಾರಕಿಹೊಳಿ

Nov 06 2024, 12:53 AM IST
ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಬಂದಾಗ ಯಾರೇ ಆದರೂ ಹಾಜರಾಗಲೇಬೇಕು. ಲೋಕಾಯುಕ್ತ ಎಲ್ಲದಕ್ಕಿಂತಲೂ ದೊಡ್ಡದು. ನೋಟಿಸ್‌ನಲ್ಲಿ ಖುದ್ದು ಹಾಜರಾಗಿ ಎಂದು ಹೇಳುವುದು ಸಹಜ. ಮುಖ್ಯಮಂತ್ರಿಗಳು ಖುದ್ದು ಹಾಜರಾಗಬಹುದು ಅಥವಾ ತಮ್ಮ ಪರವಾಗಿ ವಕೀಲರನ್ನು ಕಳಿಸಬಹುದು.

ವಕ್ಫ್ ಬಗ್ಗೆ ಸಿಎಂ ನಡೆ ಚುನಾವಣಾ ತಂತ್ರ: ಬಿಜೆಪಿ ಮಂಡಲ ಸಂಚಾಲಕ ಲೋಕೇಶ್

Nov 06 2024, 12:46 AM IST
ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿಯೇ ಮುಂದುವರಿಯಲಿದೆ ಎಂದು ಬಿಜೆಪಿ ಮಂಡಲ ಸಂಚಾಲಕ ಲೋಕೇಶ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಉಪಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿ ಭಯ ಕಾಡುತ್ತಿದೆ -ಸಿಎಂ ಸಿದ್ದರಾಮಯ್ಯ

Nov 06 2024, 12:42 AM IST
ಶಿಗ್ಗಾಂವಿ-ಸವಣೂರು ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಸೋಲುವುದು ಖಚಿತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ ಪಠಾಣ ಗೆಲ್ಲುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಉದ್ಘಾಟಿಸಿದ ಚಿತಾಗಾರದಲ್ಲಿ ಚಿತೆಯೇ ಇಲ್ಲ!

Nov 06 2024, 12:34 AM IST
ಅನಿಲ ಚಿತಾಗಾರ ಅಪೂರ್ಣವಾಗಿದ್ದರೂ ಪೂರ್ಣಗೊಂಡಿದೆ ಎಂದು ಸುಳ್ಳು ಹೇಳಿ ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಿಸಿದ್ದಾರೆ ಎಂದು ನಾಗರಿಕರು ಟೀಕಿಸಿದ್ದಾರೆ. ಪಟ್ಟಣದಲ್ಲಿ ಮೊದಲೇ ಹಿಂದೂಗಳ ಸ್ಮಶಾನ ತುಂಬಾ ಕಿರಿದಾಗಿದ್ದು ಸತ್ತವರನ್ನು ಹೂಳಲೂ ಸ್ಥಳಾವಕಾಶ ಇಲ್ಲದೆ ಪರದಾಡುವಂತಾಗಿದೆ.

ಸಿಎಂ ಸಿದ್ದರಾಮಯ್ಯ ಮೈಯೆಲ್ಲ ಕಪ್ಪಾಗಿದೆ: ಎಂ.ಪಿ. ರೇಣುಕಾಚಾರ್ಯ

Nov 06 2024, 12:34 AM IST
ತಮ್ಮ ಅಧಿಕಾರಾವಧಿಯಲ್ಲಿ ಒಂದು ಕಪ್ಪುಚುಕ್ಕೆಯೂ ಇಲ್ಲವೆನ್ನುತ್ತಿದ್ದ ಮೂಡಾ ಹಗರಣದಿಂದಾಗಿ ಸಿದ್ದರಾಮಯ್ಯ ಅವರ ಮೈಯಲ್ಲಾ ಕಪ್ಪಾಗಿದೆ.

ಇದು ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಚುನಾವಣೆ-ಸಿಎಂ

Nov 05 2024, 01:30 AM IST
ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಖಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯಾಸೀರಖಾನ್‌ ಪಠಾಣ್‌ರನ್ನು ಗೆಲ್ಲಿಸಲು ಸಿಎಂ ಸಿದ್ದು ಕರೆ

Nov 05 2024, 12:51 AM IST
ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನಷ್ಟು ಶಕ್ತಿ ಬರುತ್ತದೆ. ಸಂಡೂರು, ಚನ್ನಪಟ್ಟಣದಲ್ಲೂ ನಾವು ಗೆಲ್ತೀವಿ. ಆದ್ದರಿಂದ ಇಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಬಿಜೆಪಿ ಪ್ರಣಾಳಿಕೆ, ಬೊಮ್ಮಾಯಿ ಹಳೆಯ ವಿಡಿಯೋ ಬಳಸಿ ಸಿಎಂ ವಕ್ಫ್‌ ತಿರುಗೇಟು

Nov 05 2024, 12:48 AM IST
ಮುಡಾ ಪ್ರಕರಣದಲ್ಲಿ ತಮ್ಮ ಕುಟುಂಬ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿರುವ ಹಾಗೂ ವಕ್ಫ್‌ ವಿಚಾರ ಮುಂದಿಟ್ಟು ಹೋರಾಡುತ್ತಿರುವ ಬಿಜೆಪಿಗೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಕ್ಫ್‌ ಆಸ್ತಿ ಕುರಿತು ಮಾತನಾಡಿರುವ ಹಳೆ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಅಧಿಕಾರದಲ್ಲಿದ್ದಾಗ ಲೋಕಾ ವಿಚಾರಣೆ ಎದುರಿಸಲಿರುವ ರಾಜ್ಯದ ಮೊದಲ ಸಿಎಂ!ಮುಡಾ: ಸಿದ್ದುಗೆ ಲೋಕಾ ನೋಟಿಸ್‌, ಮೈಸೂರಲ್ಲಿ ನಾಳೆಯೇ ವಿಚಾರಣೆ

Nov 05 2024, 12:37 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ.

ವಕ್ಫ್‌ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ

Nov 05 2024, 12:37 AM IST
ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಟ್ಟಿದ್ದರು. ಬಿ.ಎಸ್‌. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್‌, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ವೇಳೆಯೂ ನೋಟಿಸ್‌ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 215
  • next >

More Trending News

Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved