ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ ಸಂಬಂಧ ಬಂಧಿತ ಆರ್ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಸೇರಿ ನಾಲ್ವರು ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಮಂಗಳವಾರ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.
11 ಮಂದಿ ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸಂಬಂಧ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ಆರ್ಸಿಬಿ ಬಳಿಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ (ಡಿಪಿಎಆರ್) ಅಧಿಕಾರಿಗಳು ಮತ್ತು ಬೆಂಗಳೂರು ಪೊಲೀಸರನ್ನು ಕೂಡ ಅಪರಾಧ ತನಿಖಾ ಇಲಾಖೆಯ (ಸಿಐಡಿ) ತನಿಖೆಗೊಳಪಡಿಸುವ ಸಾಧ್ಯತೆಯಿದೆ.
ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.
ಸಹಕಾರ ಬ್ಯಾಂಕ್ಗಳಿಗೆ 439.12 ಕೋಟಿ ರು. ವಂಚನೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಆರೋಪಪಟ್ಟಿ ಸಲ್ಲಿಕೆ ಬೆನ್ನಲ್ಲೇ ದಿಢೀರ್ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರು ಬ್ಯಾಂಕಿಗೆ 120 ಕೋಟಿ ರು. ಸಾಲ ಮರುಪಾವತಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಸಂಬಂಧಿಸಿ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಅಪರಾಧ ತನಿಖಾ ಇಲಾಖೆ (ಸಿಐಡಿ)ಯ ಡಿಜಿಪಿ ಡಾ.ಎಂ.ಎ.ಸಲೀಂ ಮೌಖಿಕವಾಗಿ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.
ಒಂದೆಡೆ ತಮ್ಮ ಆಪಾದನೆಗೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರು ಸಾಕ್ಷ್ಯ ನೀಡದೆ, ಮತ್ತೊಂದೆಡೆ ಪೂರಕವಾದ ಪುರಾವೆಗಳು ಪತ್ತೆಯಾಗದೆ ಹನಿಟ್ರ್ಯಾಪ್ ಯತ್ನ ಪ್ರಕರಣವೆಂಬುದು ಸಿಐಡಿ ವಿಚಾರಣಾ ತಂಡಕ್ಕೆ ತಲೆನೋವಾಗಿ ಪರಿಣಿಸಿದೆ.