ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದಲ್ಲಿನ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಜಯಗಳಿಸಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ನಾವು ಮಾತುಗಾರರಲ್ಲ, ಕೆಲಸಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.