ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿ ನಡೆಸಲಾಗುತ್ತಿರುವ ಎಸ್ಐಟಿ ತನಿಖೆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವಂತಾಗಬೇಕು ಎಂದು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ 50 ಮಹಿಳೆಯರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಕೋರಿದ್ದಾರೆ.
‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿಯಂತೆ ಇದ್ದರು. ತಮ್ಮ ಸರ್ಕಾರ ಮಾಡಿದ ಒಳ್ಳೆಯ ಕೆಲಸಗಳ ಶ್ರೇಯವನ್ನೂ ಅವರು ಪಡೆಯುತ್ತಿರಲಿಲ್ಲ’ ಎಂದು ಪ್ರಧಾನಿಗಳ ಕಚೇರಿ ಬಗ್ಗೆ ಜೆಎನ್ಯುನ ಅಧ್ಯಾಪಕರೊಬ್ಬರು ಬರೆದ ಪುಸ್ತಕದಲ್ಲಿ ದಾಖಲಿಸಲಾಗಿದೆ.