ಬಹುಕೋಟಿ ವಂಚನೆ ಮಾಡಿದ್ದ ಐಎಂಎ (ಐ-ಮಾನಿಟರಿ ಅಡ್ವೈಸರಿ) ಕಂಪನಿಯ ₹534.5 ಕೋಟಿ ಮೌಲ್ಯದ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.
ರಾಜ್ಯ ರಾಜಕಾರಣದಲ್ಲಿ ಭಾರೀ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣದಲ್ಲಿ ಬಿಜೆಪಿ ನಾಯಕರ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ತನಿಖೆಗೆ ಅಂತ್ಯವಾಡಲು ವಿಶೇಷ ತನಿಖಾ ದಳ (ಎಸ್ಐಟಿ) ಮುಂದಾಗಿದೆ.
ಮುಡಾ ನಿವೇಶನ ಹಂಚಿಕೆ ಹಗರಣವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದ್ದು, ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಗೆ ಹಾಜರಾಗುವಂತೆ ಇದೇ ಮೊದಲ ಬಾರಿಗೆ ನೋಟಿಸ್ ಜಾರಿ ಮಾಡಿದೆ.
ವಂಚಿಸುವ ವ್ಯವಸ್ಥಿತ ಜಾಲವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿದ್ದು, ದೇಶದ ಅಸಂಖ್ಯಾತ ನಿರುದ್ಯೋಗಿ ಯುವಜನರು, ಗೃಹಿಣಿಯರು, ವಿದ್ಯಾರ್ಥಿಗಳು, ಮತ್ತಿತರರು ಇವರ ಬಲೆಗೆ ಬಿದ್ದು ನಿತ್ಯ ಭಾರಿ ಮೊತ್ತದ ಹಣ ಕಳೆದುಕೊಳ್ಳುತ್ತಿದ್ದಾರೆಂದು ಕೇಂದ್ರ ಗೃಹ ಇಲಾಖೆಯ ವಾರ್ಷಿಕ ವರದಿಯಲ್ಲಿ ಹೇಳಿದೆ.