ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದ್ದು, ಇದೀಗ ಜಿಂದಾಲ್ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡುವ ಮೂಲಕ ಮತ್ತೊಂದು ಹಗರಣ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಟೀಕಿಸಿದ್ದಾರೆ.
ಮುಡಾ ಹಗರಣ ಆರೋಪ ಮುಕ್ತರಾಗುವವರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.
ಆಂಧ್ರ ಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪಟ್ಟಿ ತೆರೆದಿಡುವುದನ್ನು ಮುಂದುವರೆಸಿರುವ ಆಡಳಿತಾರೂಢ ಟಿಡಿಪಿ, ಎಗ್ ಪಫ್ ಸೇವನೆಗಾಗಿ ಜಗನ್ ಸರ್ಕಾರ 5 ವರ್ಷದಲ್ಲಿ 3.62 ಕೋಟಿ ರು. ಖರ್ಚು ಮಾಡಿರುವುದಾಗಿ ಆರೋಪಿಸಿದೆ.
ಮುಡಾ ಹಗರಣ ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ವಾಗಿದೆ. ಅವರು ಏನೆ ಕುತಂತ್ರ ಮಾಡಿದರೂ ರಾಜ್ಯದ ಜನತೆ ಸಿದ್ದರಾಮಯ್ಯರ ಜೊತೆಗಿದ್ದಾರೆ. ಎಲ್ಲ ಕಾಂಗ್ರೆಸ್ ಶಾಸಕರು ಮತ್ತು ಹೈಕಮಾಂಡ್ ಅವರ ಬೆನ್ನಿಗೆ ನಿಂತಿದೆ - ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್
ಮುಡಾ ಸೈಟ್ ಹಂಚಿಕೆ ಹಗರಣದ ತನಿಖೆಗೆ ರಾಜ್ಯಪಾಲರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸಲಿವೆ.